Advertisement
ಸುದ್ದಿಗಳು

#ICC World Cup | ಟೀಂ ಇಂಡಿಯಾ ಬೌಲಿಂಗ್‌ಗೆ ತತ್ತರಿಸಿದ ಪಾಕ್ | ಬ್ಲೂ ಬಾಯ್ಸ್‌ಗೆ 192 ರನ್​​ಗಳ ಟಾರ್ಗೆಟ್

Share

ಭಾರಿ ಕುತೂಲದ ಪಂದ್ಯವಾಗಿರುವ ಅಹ್ಮದಾಬಾದ್#Ahamadabad​ನ ನರೇಂದ್ರ ಮೋದಿ ಸ್ಟೇಡಿಯಂ#Narendra Modi stadiumನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ನ ಭಾರತ ಹಾಗೂ ಪಾಕಿಸ್ತಾನ#India vs Pakistan  ನಡುವಣ ಪಂದ್ಯ ರೋಚಕತೆ ಸೃಷ್ಟಿಸಿದೆ. ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಪಾಕಿಸ್ತಾನ ತಂಡ ಟೀಮ್ ಇಂಡಿಯಾ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 191 ರನ್​ಗೆ ಆಲೌಟ್ ಆಗಿದೆ. ಒಂದು ಹಂತದಲ್ಲಿ ದೊಡ್ಡ ಸ್ಕೋರ್ ಕಲೆಹಾಕುವ ಸೂಚನೆ ನೀಡಿದ್ದ ಬಾಬರ್ ಪಡೆಗೆ ಕುಲ್ದೀಪ್ ಹಾಗೂ ಬುಮ್ರಾ ಶಾಕ್ ನೀಡಿ ಅಲ್ಪ ಮೊತ್ತಕ್ಕೆ ಕುಸಿಯುವಂತೆ ಮಾಡಿದರು. ಸದ್ಯ ಭಾರತ ಗೆಲ್ಲಲು 192 ರನ್​ಗಳ ಅವಶ್ಯಕತೆ ಇದೆ.

ಟಾಸ್ ಸೋತು ಪಾಕ್ ಪರ ಇನ್ನಿಂಗ್ಸ್ ಆರಂಭಿಸಿದ ಅಬ್ದುಲ್ ಶಫೀಖ್ ಹಾಗೂ ಇಮಾನ್ ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. 8 ಓವರ್ ಆಗುವ ಹೊತ್ತಿಗೆ 41 ರನ್ ಗಳಿಸಿದ್ದಾಗ ಸಿರಾಜ್ ಬೌಲಿಂಗ್​ನಲ್ಲಿ ಶಫೀಖ್ (20) ಎಲ್​ಬಿ ಬಲೆಗೆ ಸಿಲುಕಿದರು. ನಂತರ ಇಮಾಮ್ (36) ಹಾರ್ದಿಕ್ ಪಾಂಡ್ಯ ಬೌಲಿಂಗ್​ನಲ್ಲಿ ಕೀಪರ್ ರಾಹುಲ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಆದರೆ, ಈ ಸಂದರ್ಭ ಜೊತೆಯಾದ ಪಾಕ್ ಅನುಭವಿ ಬ್ಯಾಟರ್​ಗಳಾದ ನಾಯಕ ಬಾಬರ್ ಅಝಂ ಹಾಗೂ ಮೊಹಮ್ಮದ್ ರಿಝ್ವಾನ್ ಎಚ್ಚರಿಕೆಯ ಆಟ ಪ್ರದರ್ಶಿಸಿದರು.

ಭಾರತೀಯ ಬೌಲರ್​ಗಳ ಮರ್ಮವನ್ನು ಅರಿತ ಬಾಬರ್-ರಿಝ್ವಾನ್ ಜೋಡಿ 82 ರನ್​ಗಳ ಕಾಣಿಕೆ ನೀಡಿದರು. ಫಾರ್ಮ್ ವೈಫಲ್ಯದಿಂದ ಬಳಲುತ್ತಿದ್ದ ಬಾಬರ್ ಅರ್ಧಶತಕ ಸಿಡಿಸಿದರು. ಆದರೆ, 50 ರನ್ ಗಳಿಸಿದ ಕೂಡಲೇ ಬಾಬರ್ ಅವರು ಸಿರಾಜ್ ಬೌಲಿಂಗ್​ನಲ್ಲಿ ಬೌಲ್ಡ್ ಆದರು. ಇದರ ಬೆನ್ನಲ್ಲೆ ಕುಲ್ದೀಪ್, ಸೌದ್ ಶಕೀಲ್ (6) ಅವರನ್ನು ಎಲ್​ಬಿಡಬ್ಲ್ಯೂ ಮಾಡಿದರೆ, ಇಫ್ತಿಖರ್ ಅಹ್ಮದ್​ರನ್ನು (4) ಬೌಲ್ಡ್ ಮಾಡಿದರು. ಅತ್ತ ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದ ರಿಝ್ವಾನ್ 49 ರನ್ ಗಳಿಸಿದ್ದಾಗ ಬುಮ್ರಾ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಶಬಾದ್ ಖಾನ್ ಕೂಡ 2 ರನ್​ಗೆ ಔಟಾದರು.

155 ರನ್​ಗೆ 3ನೇ ವಿಕೆಟ್ ಕಳೆದುಕೊಂಡ ಪಾಕಿಸ್ತಾನ 171 ರನ್ ಆಗುವ ಹೊತ್ತಿಗೆ 7 ವಿಕೆಟ್ ಪತನಗೊಂಡಿತು. ದಿಢೀರ್ ಕುಸಿತದಿಂದ ಬಾಬರ್ ಪಡೆ ಮೇಲೇಳಲು ಸಾಧ್ಯವಾಗಲಿಲ್ಲ. ಅಂತಿಮವಾಗಿ 42.5 ಓವರ್​ಗಳಲ್ಲಿ 191 ರನ್​ಗಳಿಗೆ ಆಲೌಟ್ ಆಯಿತು. ಭಾರತ ಪರ ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ತಲಾ 2 ವಿಕೆಟ್ ಕಿತ್ತರು.

  • ಅಂತರ್‌ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 hour ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

4 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

11 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

17 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago