Advertisement
ಸುದ್ದಿಗಳು

ಪ್ರಾಕೃತಿಕ ವಿಕೋಪ ಎದುರಿಸಲು ತಂಡಗಳು ಸನ್ನದ್ಧ | 87 ಕಾಳಜಿ ಕೇಂದ್ರಗಳಿಗೆ ಗುರುತು |

Share

ದಕ್ಷಿಣ ಕನ್ನಡ ಜಿಲ್ಲೆಗೆ ಮುಂಗಾರು ಜೂನ್ 4ಕ್ಕೆ ಮುಂಗಾರು ಪ್ರವೇಶವಾಗಲಿದ್ದು, ಜೂನ್ 1ಕ್ಕೆ   ಪ್ರಾಕೃತಿಕ ವಿಕೋಪ ಎದುರಿಸಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸನ್ನದ್ದ ಸ್ಥಿತಿಯಲ್ಲಿರಲಾಗುವುದು ಎಂದು ದಕ ಜಿಲ್ಲಾಧಿಕಾರಿ ರವಿಕುಮಾರ್ ಎಂ. ಆರ್ ಹೇಳಿದ್ದಾರೆ.

ಸೋಮವಾರ  ಮಂಗಳೂರು ನಗರದ ಕದ್ರಿಯ ಸಕ್ರ್ಯೂಟ್ ಹೌಸ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಸಿದ್ಧತೆ ಕುರಿತಂತೆ  ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್‌ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ  ಸಭೆಯಲ್ಲಿ  ಮಾತನಾಡಿದರು.ಈ ಹಿಂದೆ ಜಿಲ್ಲೆಯಲ್ಲಿ ಜರುಗಿದ ಪ್ರಾಕೃತಿಕ ವಿಕೋಪ ವಿಕೋಪಗಳ ಆಧಾರದ ಮೇಲೆ ಈಗಾಗಲೇ 87 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ, ಸಂತ್ರಸ್ತರ ಸ್ಥಳಾಂತರ ಸೇರಿದಂತೆ ಅಲ್ಲಿ ಊಟ, ಉಪಹಾರ ಸೇರಿದಂತೆ ಎಲ್ಲಾ ರೀತಿಯ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ, ಎಸ್ ಡಿ ಆರ್ ಎಫ್ ನ ತಂಡಗಳು ಸಿದ್ದವಿದ್ದು, ಎನ್ ಡಿ ಆರ್ ಎಫ್ ತಂಡ ಆಗಮಿಸಬೇಕಿದೆ ಎಂದರು. ವಿಕೋಪ ಅಥವಾ ಪ್ರವಾಹದಿಂದ ಹಾನಿಯಾದರೆ ಕೂಡಲೇ ಪರಿಹಾರ ನೀಡಲು ಜಿಲ್ಲೆಯ ಎಲ್ಲಾ ತಹಶೀಲ್ದಾರರಿಗೆ ಮೂರುವರೆ ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.

ಸಭಾಧ್ಯಕ್ಷರಾದ ಯು.ಟಿ. ಖಾದರ್ ಮಾತನಾಡಿ, ಜಿಲ್ಲೆಯ ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲೂ ತಳಮಟ್ಟದಲ್ಲಿ ಅಧಿಕಾರಿ, ಸಿಬ್ಬಂದಿಗಳ ತಂಡವನ್ನು ಈಗಲೇ ಸಿದ್ಧಪಡಿಸಬೇಕು, ಪ್ರಾಕೃತಿಕ ವಿಕೋಪಗಳಿಂದ ಒದಗಬಹುದಾದ ಸಂಭವನೀಯ ಅಪಾಯಗಳನ್ನು ತಡೆಗಟ್ಟುವ ಬಗ್ಗೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಪ್ರಾಕೃತಿಕ ವಿಕೋಪಗಳಿಂದಾಗುವ ಹಾನಿ, ಸಮಸ್ಯೆಗಳನ್ನು ಪರಿಹರಿಸುವ ಸಂದರ್ಭದಲ್ಲಿ ಸ್ಥಳೀಯ ಸಂಘ-ಸಂಸ್ಥೆಗಳ ಯುವಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ತಂಡವನ್ನು ಸಿದ್ಧಪಡಿಸಿ ಎಸ್ ಡಿ ಆರ್ ಎಫ್ ಹಾಗೂ ಎನ್ ಡಿ ಆರ್ ಎಫ್ ತಂಡದೊಂದಿಗೆ ನಿಯೋಜಿಸಬೇಕು ಇದಕ್ಕಾಗಿ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಧಿಕಾರಿಗಳು ಸಭೆಯೊಂದನ್ನು ನೆಡೆಸಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.‌

ಪ್ರಮುಖವಾಗಿ ಮೆಸ್ಕಾಂನವರು ಅರಣ್ಯ ಇಲಾಖೆಯೊಂದಿಗೆ ಸೇರಿಕೊಂಡು ಅಪಾಯಕಾರಿ ಗಿಡ ಮರಗಳನ್ನು ತೆರವುಗೊಳಿಸುವುದು ಹಾಗೂ ವಿದ್ಯುತ್ ತಂತಿಗಳು ಹಾದು ಹೋಗಿರುವ ಕಡೆಗಳಲ್ಲಿರುವ ಮರ ಗಿಡಗಳ ಅಪಾಯಕಾರಿ ರಂಬೆ ಕೊಂಬೆಗಳನ್ನು ಕತ್ತರಿಸಬೇಕು, ವಿದ್ಯುತ್ ತಂತಿಗಳು ಬಿದ್ದು ಯಾವುದಾದರೂ ಪ್ರಾಣ ಹೋದಲ್ಲಿ ಸಂಬಂಧಪಟ್ಟ ಮೆಸ್ಕಾಂನ ಜೂನಿಯರ್ ಇಂಜಿನಿಯರ್ ಹಾಗೂ ಅರಣ್ಯ ಇಲಾಖೆಯ ರೇಂಜ್ ಆಫೀಸರ್ ಗಳನ್ನು ನೇರವಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಶಾಸಕರಾದ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಪೊಲೀಸ್ ವಿಭಾಗದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅನ್ಶುಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತರಾದ ರಾಜು, ಗಿರೀಶ್ ನಂದನ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ತಹಶೀಲ್ದಾರರು ಸಭೆಯಲ್ಲಿ ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

3 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

4 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

4 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

12 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

12 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago