ಬಿಜೆಪಿ ರಾಷ್ಟ್ರೀಯ ಯುವಘಟಕದ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ

September 26, 2020
5:43 PM
 ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಎಂಟು ತಿಂಗಳ ಬಳಿಕ ಜೆ.ಪಿ. ನಡ್ಡಾ ಅವರು ಹೊಸ ಪದಾಧಿಕಾರಿಗಳ ತಂಡವನ್ನು ಪ್ರಕಟಿಸಿದ್ದಾರೆ. ಪದಾಧಿಕಾರಿಗಳ ಪಟ್ಟಿಯಲ್ಲಿ ದೊಡ್ಡ ಮಟ್ಟದ ಬದಲಾವಣೆಗಳನ್ನು ಮಾಡಲಾಗಿದೆ. ರಾಷ್ಟ್ರೀಯ ಅಧಿಕಾರಿಗಳ ಹೊಸ ಪಟ್ಟಿಯನ್ನು ಬಿಜೆಪಿ ಇದೀಗ ಬಿಡುಗಡೆ ಮಾಡಿದ್ದು, ರಾಜ್ಯದ ಮೂವರು ರಾಜಕಾರಣಿಗಳಿಗೆ ಸ್ಥಾನ ಲಭಿಸಿದೆ.

Advertisement
Advertisement

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಚಿವ ಸಿ.ಟಿ. ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಸಂಸದ ರಾಜೀವ್ ಚಂದ್ರಶೇಖರ್ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ.

 

 

Advertisement

 

 

 

 

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ ಮಾಧವ್, ಪಿ.ಮುರಳೀಧರ್‌ ರಾವ್‌, ಅನಿಲ್‌ ಜೈನ್‌, ಸರೋಜ್‌ ಪಾಂಡೆ ಅವರ ಸ್ಥಾನಗಳಿಗೆ ಹೊಸಬರ ನೇಮಕವಾಗಿದೆ.

Advertisement

ಒಬಿಸಿ ಮೋರ್ಚಾದ ಅಧ್ಯಕ್ಷರನ್ನಾಗಿ ತೆಲಂಗಾಣದ ಡಾ.ಕೆ ಲಕ್ಷ್ಮಣ್ ಅವರನ್ನು ನೇಮಕ ಮಾಡಲಾಗಿದೆ. ರಾಷ್ಟ್ರೀಯ ವಕ್ತಾರರನ್ನಾಗಿ ಉತ್ತರಾಖಂಡ್ ನ ಅನಿಲ್ ಬಲುನಿ, ಸಂಜಯ್ ಮಯೂಖ್, ಡಾ. ಸಂಬಿತ್ ಪಾತ್ರ, ಡಾ. ಸುಧಾಂಶು ತ್ರಿವೇದಿ, ಡಾ. ಸಯೀದ್ ಶಾನವಾಜ್ ಹುಸೇನ್ ಅವರನ್ನು ನೇಮಕ ಮಾಡಲಾಗಿದೆ. ಈವರೆಗೂ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ಪೂನಂ ಮಹಾಜನ್ ಕಾರ್ಯನಿರ್ವಹಿಸಿದ್ದರು.

ಪಕ್ಷದ ರಾಷ್ಟ್ರೀಯ ವಕ್ತಾರರ ಸಂಖ್ಯೆಯನ್ನು 23ಕ್ಕೆ ಹೆಚ್ಚಿಸಲಾಗಿದ್ದು, ಸಂಸದ ಅನಿಲ್‌ ಬಲೂನಿ ಅವರನ್ನು ಪ್ರಧಾನ ವಕ್ತಾರರನ್ನಾಗಿ ಮಾಡಲಾಗಿದೆ .

 

 

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಆರೋಪಿಗಳ ಪತ್ತೆಗೆ 4  ಪ್ರತ್ಯೇಕ ತಂಡ ರಚನೆ | ದಕ್ಷಿಣ ಕನ್ನಡದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಬದ್ಧ
May 2, 2025
8:59 PM
by: ದ ರೂರಲ್ ಮಿರರ್.ಕಾಂ
ರೈತರಿಗೆ 400 ಕೋಟಿ ರೂಪಾಯಿ ವೆಚ್ಚದಲ್ಲಿ ಕೃಷಿ ಮತ್ತು ಯಂತ್ರೋಪಕರಣ ವಿತರಣೆ
April 22, 2025
6:22 AM
by: The Rural Mirror ಸುದ್ದಿಜಾಲ
ಧರ್ಮವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ – ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್
April 20, 2025
8:55 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group