Advertisement
Political mirror

ಬಿಜೆಪಿ ರಾಷ್ಟ್ರೀಯ ಯುವಘಟಕದ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ

Share
ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಎಂಟು ತಿಂಗಳ ಬಳಿಕ ಜೆ.ಪಿ. ನಡ್ಡಾ ಅವರು ಹೊಸ ಪದಾಧಿಕಾರಿಗಳ ತಂಡವನ್ನು ಪ್ರಕಟಿಸಿದ್ದಾರೆ. ಪದಾಧಿಕಾರಿಗಳ ಪಟ್ಟಿಯಲ್ಲಿ ದೊಡ್ಡ ಮಟ್ಟದ ಬದಲಾವಣೆಗಳನ್ನು ಮಾಡಲಾಗಿದೆ. ರಾಷ್ಟ್ರೀಯ ಅಧಿಕಾರಿಗಳ ಹೊಸ ಪಟ್ಟಿಯನ್ನು ಬಿಜೆಪಿ ಇದೀಗ ಬಿಡುಗಡೆ ಮಾಡಿದ್ದು, ರಾಜ್ಯದ ಮೂವರು ರಾಜಕಾರಣಿಗಳಿಗೆ ಸ್ಥಾನ ಲಭಿಸಿದೆ.
Advertisement

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಚಿವ ಸಿ.ಟಿ. ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಸಂಸದ ರಾಜೀವ್ ಚಂದ್ರಶೇಖರ್ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ.

 

 

 

 

 

 

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ ಮಾಧವ್, ಪಿ.ಮುರಳೀಧರ್‌ ರಾವ್‌, ಅನಿಲ್‌ ಜೈನ್‌, ಸರೋಜ್‌ ಪಾಂಡೆ ಅವರ ಸ್ಥಾನಗಳಿಗೆ ಹೊಸಬರ ನೇಮಕವಾಗಿದೆ.

ಒಬಿಸಿ ಮೋರ್ಚಾದ ಅಧ್ಯಕ್ಷರನ್ನಾಗಿ ತೆಲಂಗಾಣದ ಡಾ.ಕೆ ಲಕ್ಷ್ಮಣ್ ಅವರನ್ನು ನೇಮಕ ಮಾಡಲಾಗಿದೆ. ರಾಷ್ಟ್ರೀಯ ವಕ್ತಾರರನ್ನಾಗಿ ಉತ್ತರಾಖಂಡ್ ನ ಅನಿಲ್ ಬಲುನಿ, ಸಂಜಯ್ ಮಯೂಖ್, ಡಾ. ಸಂಬಿತ್ ಪಾತ್ರ, ಡಾ. ಸುಧಾಂಶು ತ್ರಿವೇದಿ, ಡಾ. ಸಯೀದ್ ಶಾನವಾಜ್ ಹುಸೇನ್ ಅವರನ್ನು ನೇಮಕ ಮಾಡಲಾಗಿದೆ. ಈವರೆಗೂ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ಪೂನಂ ಮಹಾಜನ್ ಕಾರ್ಯನಿರ್ವಹಿಸಿದ್ದರು.

ಪಕ್ಷದ ರಾಷ್ಟ್ರೀಯ ವಕ್ತಾರರ ಸಂಖ್ಯೆಯನ್ನು 23ಕ್ಕೆ ಹೆಚ್ಚಿಸಲಾಗಿದ್ದು, ಸಂಸದ ಅನಿಲ್‌ ಬಲೂನಿ ಅವರನ್ನು ಪ್ರಧಾನ ವಕ್ತಾರರನ್ನಾಗಿ ಮಾಡಲಾಗಿದೆ .

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

2 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

7 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

7 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

7 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

19 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago