ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಚಿವ ಸಿ.ಟಿ. ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಸಂಸದ ರಾಜೀವ್ ಚಂದ್ರಶೇಖರ್ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಪಿ.ಮುರಳೀಧರ್ ರಾವ್, ಅನಿಲ್ ಜೈನ್, ಸರೋಜ್ ಪಾಂಡೆ ಅವರ ಸ್ಥಾನಗಳಿಗೆ ಹೊಸಬರ ನೇಮಕವಾಗಿದೆ.
ಒಬಿಸಿ ಮೋರ್ಚಾದ ಅಧ್ಯಕ್ಷರನ್ನಾಗಿ ತೆಲಂಗಾಣದ ಡಾ.ಕೆ ಲಕ್ಷ್ಮಣ್ ಅವರನ್ನು ನೇಮಕ ಮಾಡಲಾಗಿದೆ. ರಾಷ್ಟ್ರೀಯ ವಕ್ತಾರರನ್ನಾಗಿ ಉತ್ತರಾಖಂಡ್ ನ ಅನಿಲ್ ಬಲುನಿ, ಸಂಜಯ್ ಮಯೂಖ್, ಡಾ. ಸಂಬಿತ್ ಪಾತ್ರ, ಡಾ. ಸುಧಾಂಶು ತ್ರಿವೇದಿ, ಡಾ. ಸಯೀದ್ ಶಾನವಾಜ್ ಹುಸೇನ್ ಅವರನ್ನು ನೇಮಕ ಮಾಡಲಾಗಿದೆ. ಈವರೆಗೂ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ಪೂನಂ ಮಹಾಜನ್ ಕಾರ್ಯನಿರ್ವಹಿಸಿದ್ದರು.
ಪಕ್ಷದ ರಾಷ್ಟ್ರೀಯ ವಕ್ತಾರರ ಸಂಖ್ಯೆಯನ್ನು 23ಕ್ಕೆ ಹೆಚ್ಚಿಸಲಾಗಿದ್ದು, ಸಂಸದ ಅನಿಲ್ ಬಲೂನಿ ಅವರನ್ನು ಪ್ರಧಾನ ವಕ್ತಾರರನ್ನಾಗಿ ಮಾಡಲಾಗಿದೆ .
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…
ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…