Advertisement
Political mirror

ಬಿಜೆಪಿ ರಾಷ್ಟ್ರೀಯ ಯುವಘಟಕದ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ

Share
ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಎಂಟು ತಿಂಗಳ ಬಳಿಕ ಜೆ.ಪಿ. ನಡ್ಡಾ ಅವರು ಹೊಸ ಪದಾಧಿಕಾರಿಗಳ ತಂಡವನ್ನು ಪ್ರಕಟಿಸಿದ್ದಾರೆ. ಪದಾಧಿಕಾರಿಗಳ ಪಟ್ಟಿಯಲ್ಲಿ ದೊಡ್ಡ ಮಟ್ಟದ ಬದಲಾವಣೆಗಳನ್ನು ಮಾಡಲಾಗಿದೆ. ರಾಷ್ಟ್ರೀಯ ಅಧಿಕಾರಿಗಳ ಹೊಸ ಪಟ್ಟಿಯನ್ನು ಬಿಜೆಪಿ ಇದೀಗ ಬಿಡುಗಡೆ ಮಾಡಿದ್ದು, ರಾಜ್ಯದ ಮೂವರು ರಾಜಕಾರಣಿಗಳಿಗೆ ಸ್ಥಾನ ಲಭಿಸಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಚಿವ ಸಿ.ಟಿ. ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಸಂಸದ ರಾಜೀವ್ ಚಂದ್ರಶೇಖರ್ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ.

 

 

 

 

 

 

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ ಮಾಧವ್, ಪಿ.ಮುರಳೀಧರ್‌ ರಾವ್‌, ಅನಿಲ್‌ ಜೈನ್‌, ಸರೋಜ್‌ ಪಾಂಡೆ ಅವರ ಸ್ಥಾನಗಳಿಗೆ ಹೊಸಬರ ನೇಮಕವಾಗಿದೆ.

ಒಬಿಸಿ ಮೋರ್ಚಾದ ಅಧ್ಯಕ್ಷರನ್ನಾಗಿ ತೆಲಂಗಾಣದ ಡಾ.ಕೆ ಲಕ್ಷ್ಮಣ್ ಅವರನ್ನು ನೇಮಕ ಮಾಡಲಾಗಿದೆ. ರಾಷ್ಟ್ರೀಯ ವಕ್ತಾರರನ್ನಾಗಿ ಉತ್ತರಾಖಂಡ್ ನ ಅನಿಲ್ ಬಲುನಿ, ಸಂಜಯ್ ಮಯೂಖ್, ಡಾ. ಸಂಬಿತ್ ಪಾತ್ರ, ಡಾ. ಸುಧಾಂಶು ತ್ರಿವೇದಿ, ಡಾ. ಸಯೀದ್ ಶಾನವಾಜ್ ಹುಸೇನ್ ಅವರನ್ನು ನೇಮಕ ಮಾಡಲಾಗಿದೆ. ಈವರೆಗೂ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ಪೂನಂ ಮಹಾಜನ್ ಕಾರ್ಯನಿರ್ವಹಿಸಿದ್ದರು.

ಪಕ್ಷದ ರಾಷ್ಟ್ರೀಯ ವಕ್ತಾರರ ಸಂಖ್ಯೆಯನ್ನು 23ಕ್ಕೆ ಹೆಚ್ಚಿಸಲಾಗಿದ್ದು, ಸಂಸದ ಅನಿಲ್‌ ಬಲೂನಿ ಅವರನ್ನು ಪ್ರಧಾನ ವಕ್ತಾರರನ್ನಾಗಿ ಮಾಡಲಾಗಿದೆ .

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

3 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

4 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

4 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

12 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

13 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

14 hours ago