Advertisement
Political mirror

ಬಿಜೆಪಿ ರಾಷ್ಟ್ರೀಯ ಯುವಘಟಕದ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ

Share
ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಎಂಟು ತಿಂಗಳ ಬಳಿಕ ಜೆ.ಪಿ. ನಡ್ಡಾ ಅವರು ಹೊಸ ಪದಾಧಿಕಾರಿಗಳ ತಂಡವನ್ನು ಪ್ರಕಟಿಸಿದ್ದಾರೆ. ಪದಾಧಿಕಾರಿಗಳ ಪಟ್ಟಿಯಲ್ಲಿ ದೊಡ್ಡ ಮಟ್ಟದ ಬದಲಾವಣೆಗಳನ್ನು ಮಾಡಲಾಗಿದೆ. ರಾಷ್ಟ್ರೀಯ ಅಧಿಕಾರಿಗಳ ಹೊಸ ಪಟ್ಟಿಯನ್ನು ಬಿಜೆಪಿ ಇದೀಗ ಬಿಡುಗಡೆ ಮಾಡಿದ್ದು, ರಾಜ್ಯದ ಮೂವರು ರಾಜಕಾರಣಿಗಳಿಗೆ ಸ್ಥಾನ ಲಭಿಸಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಚಿವ ಸಿ.ಟಿ. ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಸಂಸದ ರಾಜೀವ್ ಚಂದ್ರಶೇಖರ್ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ.

 

 

 

 

 

 

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ ಮಾಧವ್, ಪಿ.ಮುರಳೀಧರ್‌ ರಾವ್‌, ಅನಿಲ್‌ ಜೈನ್‌, ಸರೋಜ್‌ ಪಾಂಡೆ ಅವರ ಸ್ಥಾನಗಳಿಗೆ ಹೊಸಬರ ನೇಮಕವಾಗಿದೆ.

ಒಬಿಸಿ ಮೋರ್ಚಾದ ಅಧ್ಯಕ್ಷರನ್ನಾಗಿ ತೆಲಂಗಾಣದ ಡಾ.ಕೆ ಲಕ್ಷ್ಮಣ್ ಅವರನ್ನು ನೇಮಕ ಮಾಡಲಾಗಿದೆ. ರಾಷ್ಟ್ರೀಯ ವಕ್ತಾರರನ್ನಾಗಿ ಉತ್ತರಾಖಂಡ್ ನ ಅನಿಲ್ ಬಲುನಿ, ಸಂಜಯ್ ಮಯೂಖ್, ಡಾ. ಸಂಬಿತ್ ಪಾತ್ರ, ಡಾ. ಸುಧಾಂಶು ತ್ರಿವೇದಿ, ಡಾ. ಸಯೀದ್ ಶಾನವಾಜ್ ಹುಸೇನ್ ಅವರನ್ನು ನೇಮಕ ಮಾಡಲಾಗಿದೆ. ಈವರೆಗೂ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ಪೂನಂ ಮಹಾಜನ್ ಕಾರ್ಯನಿರ್ವಹಿಸಿದ್ದರು.

ಪಕ್ಷದ ರಾಷ್ಟ್ರೀಯ ವಕ್ತಾರರ ಸಂಖ್ಯೆಯನ್ನು 23ಕ್ಕೆ ಹೆಚ್ಚಿಸಲಾಗಿದ್ದು, ಸಂಸದ ಅನಿಲ್‌ ಬಲೂನಿ ಅವರನ್ನು ಪ್ರಧಾನ ವಕ್ತಾರರನ್ನಾಗಿ ಮಾಡಲಾಗಿದೆ .

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

4 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

6 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

7 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago