ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಚಿವ ಸಿ.ಟಿ. ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಸಂಸದ ರಾಜೀವ್ ಚಂದ್ರಶೇಖರ್ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಪಿ.ಮುರಳೀಧರ್ ರಾವ್, ಅನಿಲ್ ಜೈನ್, ಸರೋಜ್ ಪಾಂಡೆ ಅವರ ಸ್ಥಾನಗಳಿಗೆ ಹೊಸಬರ ನೇಮಕವಾಗಿದೆ.
ಒಬಿಸಿ ಮೋರ್ಚಾದ ಅಧ್ಯಕ್ಷರನ್ನಾಗಿ ತೆಲಂಗಾಣದ ಡಾ.ಕೆ ಲಕ್ಷ್ಮಣ್ ಅವರನ್ನು ನೇಮಕ ಮಾಡಲಾಗಿದೆ. ರಾಷ್ಟ್ರೀಯ ವಕ್ತಾರರನ್ನಾಗಿ ಉತ್ತರಾಖಂಡ್ ನ ಅನಿಲ್ ಬಲುನಿ, ಸಂಜಯ್ ಮಯೂಖ್, ಡಾ. ಸಂಬಿತ್ ಪಾತ್ರ, ಡಾ. ಸುಧಾಂಶು ತ್ರಿವೇದಿ, ಡಾ. ಸಯೀದ್ ಶಾನವಾಜ್ ಹುಸೇನ್ ಅವರನ್ನು ನೇಮಕ ಮಾಡಲಾಗಿದೆ. ಈವರೆಗೂ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ಪೂನಂ ಮಹಾಜನ್ ಕಾರ್ಯನಿರ್ವಹಿಸಿದ್ದರು.
ಪಕ್ಷದ ರಾಷ್ಟ್ರೀಯ ವಕ್ತಾರರ ಸಂಖ್ಯೆಯನ್ನು 23ಕ್ಕೆ ಹೆಚ್ಚಿಸಲಾಗಿದ್ದು, ಸಂಸದ ಅನಿಲ್ ಬಲೂನಿ ಅವರನ್ನು ಪ್ರಧಾನ ವಕ್ತಾರರನ್ನಾಗಿ ಮಾಡಲಾಗಿದೆ .
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…