ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಚಿವ ಸಿ.ಟಿ. ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಸಂಸದ ರಾಜೀವ್ ಚಂದ್ರಶೇಖರ್ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಪಿ.ಮುರಳೀಧರ್ ರಾವ್, ಅನಿಲ್ ಜೈನ್, ಸರೋಜ್ ಪಾಂಡೆ ಅವರ ಸ್ಥಾನಗಳಿಗೆ ಹೊಸಬರ ನೇಮಕವಾಗಿದೆ.
ಒಬಿಸಿ ಮೋರ್ಚಾದ ಅಧ್ಯಕ್ಷರನ್ನಾಗಿ ತೆಲಂಗಾಣದ ಡಾ.ಕೆ ಲಕ್ಷ್ಮಣ್ ಅವರನ್ನು ನೇಮಕ ಮಾಡಲಾಗಿದೆ. ರಾಷ್ಟ್ರೀಯ ವಕ್ತಾರರನ್ನಾಗಿ ಉತ್ತರಾಖಂಡ್ ನ ಅನಿಲ್ ಬಲುನಿ, ಸಂಜಯ್ ಮಯೂಖ್, ಡಾ. ಸಂಬಿತ್ ಪಾತ್ರ, ಡಾ. ಸುಧಾಂಶು ತ್ರಿವೇದಿ, ಡಾ. ಸಯೀದ್ ಶಾನವಾಜ್ ಹುಸೇನ್ ಅವರನ್ನು ನೇಮಕ ಮಾಡಲಾಗಿದೆ. ಈವರೆಗೂ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ಪೂನಂ ಮಹಾಜನ್ ಕಾರ್ಯನಿರ್ವಹಿಸಿದ್ದರು.
ಪಕ್ಷದ ರಾಷ್ಟ್ರೀಯ ವಕ್ತಾರರ ಸಂಖ್ಯೆಯನ್ನು 23ಕ್ಕೆ ಹೆಚ್ಚಿಸಲಾಗಿದ್ದು, ಸಂಸದ ಅನಿಲ್ ಬಲೂನಿ ಅವರನ್ನು ಪ್ರಧಾನ ವಕ್ತಾರರನ್ನಾಗಿ ಮಾಡಲಾಗಿದೆ .
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…