ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಚಿವ ಸಿ.ಟಿ. ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಸಂಸದ ರಾಜೀವ್ ಚಂದ್ರಶೇಖರ್ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಪಿ.ಮುರಳೀಧರ್ ರಾವ್, ಅನಿಲ್ ಜೈನ್, ಸರೋಜ್ ಪಾಂಡೆ ಅವರ ಸ್ಥಾನಗಳಿಗೆ ಹೊಸಬರ ನೇಮಕವಾಗಿದೆ.
ಒಬಿಸಿ ಮೋರ್ಚಾದ ಅಧ್ಯಕ್ಷರನ್ನಾಗಿ ತೆಲಂಗಾಣದ ಡಾ.ಕೆ ಲಕ್ಷ್ಮಣ್ ಅವರನ್ನು ನೇಮಕ ಮಾಡಲಾಗಿದೆ. ರಾಷ್ಟ್ರೀಯ ವಕ್ತಾರರನ್ನಾಗಿ ಉತ್ತರಾಖಂಡ್ ನ ಅನಿಲ್ ಬಲುನಿ, ಸಂಜಯ್ ಮಯೂಖ್, ಡಾ. ಸಂಬಿತ್ ಪಾತ್ರ, ಡಾ. ಸುಧಾಂಶು ತ್ರಿವೇದಿ, ಡಾ. ಸಯೀದ್ ಶಾನವಾಜ್ ಹುಸೇನ್ ಅವರನ್ನು ನೇಮಕ ಮಾಡಲಾಗಿದೆ. ಈವರೆಗೂ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ಪೂನಂ ಮಹಾಜನ್ ಕಾರ್ಯನಿರ್ವಹಿಸಿದ್ದರು.
ಪಕ್ಷದ ರಾಷ್ಟ್ರೀಯ ವಕ್ತಾರರ ಸಂಖ್ಯೆಯನ್ನು 23ಕ್ಕೆ ಹೆಚ್ಚಿಸಲಾಗಿದ್ದು, ಸಂಸದ ಅನಿಲ್ ಬಲೂನಿ ಅವರನ್ನು ಪ್ರಧಾನ ವಕ್ತಾರರನ್ನಾಗಿ ಮಾಡಲಾಗಿದೆ .
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…