ರೈತರ ಸಾಲ ಮನ್ನಾ ಮಾಡಿದ ತೆಲಂಗಾಣ ಕಾಂಗ್ರೆಸ್ ಸರ್ಕಾರ | ರಾಜ್ಯದಲ್ಲಿ ಏನು ಮಾಡುತ್ತಾರೆ..? – ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ |

June 22, 2024
12:46 PM

ಬೇರೆ ರಾಜ್ಯಗಳಂತೆ ರಾಜ್ಯದ ರೈತರ(Farmer) ಸಾಲ ಮನ್ನಾ (Loan waiver) ಮಾಡುವಂತೆ ಎಕ್ಸ್‌ನಲ್ಲಿ(ಟ್ವಿಟ್ಟರ್) ಆರ್.ಅಶೋಕ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಸಿಎಂ ರೇವಂತ್ ರೆಡ್ಡಿ ಘೋಷಣೆ‌ : ತೆಲಂಗಾಣ ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿದೆ. ಚುನಾವಣೆಗೂ ಮುನ್ನ ಹೇಳಿದಂತೆ ರೈತರ 2 ಲಕ್ಷ ರೂಪಾಯಿ ವರೆಗಿನ ಸಾಲ ಮನ್ನಾ ಮಾಡಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಸ್ವತಃ ಸಿಎಂ ರೇವಂತ್ ರೆಡ್ಡಿ ಬಹಿರಂಗಪಡಿಸಿದ್ದಾರೆ. ಮೇಲಾಗಿ ಆರು ತಿಂಗಳ ಸಾಲ ಮನ್ನಾಕ್ಕೆ ಹಣ ಪಾವತಿಸಿರುವ ಸರ್ಕಾರ ಬ್ಯಾಂಕ್ ಗಳಿಗೆ ಒಟ್ಟು 31 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ಹೇಳಿದೆ. ಡಿಸೆಂಬರ್ 9, 2023ರ ಮೊದಲು ಪಡೆದ ರೈತರ ಸಾಲವನ್ನು ಮನ್ನಾ ಮಾಡಲಾಗುತ್ತದೆ ಎಂದು ಘೋಷಣೆ ಮಾಡಲಾಗಿದೆ.

ಅಧಿಕಾರಕ್ಕೆ ಬಂದ 6 ತಿಂಗಳ ನಂತ್ರ ಸಾಲಮನ್ನಾ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಸಾಲ ಮನ್ನಾ ಜಾರಿ ಮಾಡುವುದಾಗಿ ಘೋಷಣೆ ಮಾಡಿತ್ತು. ಡಿಸೆಂಬರ್ 9 ರಂದು ಎಲ್ಲಾ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿದರು. ಇದು ನಿಜ ಎಂದು ರೈತರು ಭಾವಿಸಿದ್ದರು, ಡಿಸೆಂಬರ್ 7ರಂದು ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಆದರೆ ಸಾಲ ಮನ್ನಾ ಜಾರಿಯಾಗಿರಲಿಲ್ಲ. ಆದರೆ ಈಗ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳು ಕಳೆದಿದ್ದು, ಕೊನೆಗೂ ಸಾಲ ಮನ್ನಾ ಜಾರಿ ಮಾಡುವುದಾಗಿ ಘೋಷಿಸಿದೆ. ಈಗಲೂ ಸರ್ಕಾರ ಯಾವ ದಿನಾಂಕದಂದು ಮನ್ನಾ ಮಾಡುವುದಾಗಿ ಹೇಳಿಲ್ಲ. ಇದರಿಂದ ರೈತರು ಪಡೆದ ಸಾಲದ ಮೇಲಿನ ಬಡ್ಡಿ ಹೆಚ್ಚಾಗುತ್ತಿದೆ. ಮಳೆ ಬಾರದೆ ರೈತರು ನಾನಾ ರೀತಿಯ ನಷ್ಟ ಅನುಭವಿಸುತ್ತಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror