MIRROR FOCUS

ದಿನದಿಂದ ದಿನಕ್ಕೆ ಏರುತ್ತಿದೆ ರಾಜ್ಯದಲ್ಲಿ ಉಷ್ಣಾಂಶ | ಕರಾವಳಿಯಲ್ಲಿ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈಗಿನ್ನೂ ಮಾರ್ಚ್‌ ತಿಂಗಳ ಆರಂಭ. ಈಗಲೇ  ಉರಿ ಬಿಸಿಲು(Heat) ತಡೆಯಲು ಆಗುತ್ತಿಲ್ಲ. ಇನ್ನು ಎಪ್ರಿಲ್‌, ಮೇ, ಜೂನ್‌ ತಿಂಗಳ ಕಥೆ ಏನು..? ಈ ಬಿಸಿಲ ಪ್ರಖರತೆಯನ್ನು ತಡೆದುಕೊಳ್ಳೊದು ಹೇಗೆ..? ಅನ್ನುವ ಪ್ರಶ್ನೆ ಈಗಾಗಲೇ ಎಲ್ಲರ ಮನದಲ್ಲೂ ಮೂಡಿದೆ. ಬೆಂಗಳೂರು(Bengaluru) ಸೇರಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ(Temprature) ಹೆಚ್ಚಾಗುತ್ತಲೇ ಇದೆ. ಅಲ್ಲದೇ ಕೆಲ ಜಿಲ್ಲೆಗಳಲ್ಲಿ ಒಣಹವೆ(drought) ಮುಂದುವರೆಯಲಿದೆ. ಉಷ್ಣ ಮಾರುತ( heat wave) ಏಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ(Meteorological Department) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಭಾಗದಲ್ಲೂ ವಾತಾವರಣದ ಉಷ್ಣತೆ ಏರಿಕೆಯಾಗುತ್ತಿರುವುದು ಹವಾಮಾನ ವೈಪರೀತ್ಯದ ಸ್ಪಷ್ಟ ನಿದರ್ಶನವಾಗಿದೆ.

Advertisement

ಕರಾವಳಿಯ(coastal) ಕೆಲವು ಕಡೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್, ಮೇ ತಿಂಗಳಿನಲ್ಲಿ ವಿಪರೀತ ಸೆಕೆಯ ಜೊತೆಗೆ ಉತ್ತರ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಉಷ್ಣ ಮಾರುತ ಏಳುವ ಸಾಧ್ಯತೆ ಇದೆ ಎಂದು ಸೂಚನೆ ನೀಡಿದೆ ಹವಾಮಾನ ಇಲಾಖೆ. ಈಗಾಗಲೇ ಉಷ್ಣಾಂಶ ಏರಿಕೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನರು ಸಂಕಷ್ಟಪಡುವಂತಾಗಿದೆ. ಮಾರ್ಚ್‍ನಲ್ಲಿ ವಾಡಿಕೆಯ ಮಳೆಯೂ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.….ಮುಂದೆ ಓದಿ…..

ಒಂದೆಡೆ ಬಿಸಿಲಿನ ಅಬ್ಬರ ದಿನೇ ದಿನೇ ಜೋರಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ತಾಪಮಾನ ತಡೆಯಲಾಗುತ್ತಿಲ್ಲ. ಇತ್ತ ಕುಡಿಯುವ ನೀರಿಗೂ ಕೊರತೆ ಉಂಟಾಗಿ ಜನಸಾಮಾನ್ಯರು ಸಮಸ್ಯೆ ಅನುಭವಿಸುವಂತಾಗಿದೆ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಪ್ರಮುಖ ಜೀವನದಿಗಳು ಈಗಾಗಲೇ ಬತ್ತಿ ಹೋಗಿವೆ. ಈ ನಡುವೆ ಉಷ್ಣ ಮಾರುತಗಳ ಭೀತಿ ಎದುರಾಗಿದ್ದು ಜನರು ಆತಂಕಪಡುವಂತೆ ಮಾಡಿದೆ. ಈ ತಿಂಗಳಲ್ಲಾದ್ರೂ ಮಳೆಯಾಗುತ್ತಾ ಎಂದು ಜನ ಕಾಯ್ತಾ ಇದ್ದಾರೆ. ಆದ್ರೆ ಬಿಸಿಲು ಹೆಚ್ಚಾಗುತ್ತಲೇ ಇದೆ. ಇನ್ನೂ ಹೆಚ್ಚಾಗಲಿದೆ ಎಂದು ಸೂಚನೆ ಸಿಕ್ಕಿದೆ.….ಮುಂದೆ ಓದಿ…..

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವಾತಾವರಣದ ಉಷ್ಣತೆ ಏರಿಕೆಯಾಗುತ್ತಿದೆ.ಕಳೆದ ಎರಡು ವರ್ಷಗಳಿಂದ ಈ ಮಾದರಿಯ ಹವಾಮಾನ ಸೃಷ್ಟಿಯಾಗುತ್ತಿದೆ. ಸುಮಾರು 5-10 ವರ್ಷಗಳ ಹಿಂದೆ ವಾತಾವರಣದ ಉಷ್ಣತೆ 35 ಡಿಗ್ರಿಗಿಂದ ಅಧಿಕವಾದರೆ ಮಲೆನಾಡು, ಕರಾವಳಿಯ ವಿವಿಧ ಕಡೆ ಮಳೆಯಾಗುತ್ತದೆ ಎನ್ನುವ ಸಾಮಾನ್ಯ ಮಾತು ಇತ್ತು. ಇದೀಗ ಎರಡು ವರ್ಷಗಳಿಂದ ವಾತಾವರಣದ ಉಷ್ಣತೆ 40 ಡಿಗ್ರಿಯಾದರೂ ಮಳೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಹೀಗಾಗಿ ದಿನದಿಂದ ದಿನಕ್ಕೆ ವಾತಾವರಣದ ಬಿಸಿ ಏರಿಕೆಯಾಗುತ್ತಿದೆ. ಇದಕ್ಕೆ ಕಾರಣಗಳು ಹಲವಾರು.

ಮಲೆನಾಡಲ್ಲಿ ತಾಪಮಾನ..
ಸದ್ಯ ಸುಬ್ರಹ್ಮಣ್ಯ ಸೇರಿದಂತೆ ಮಲೆನಾಡು ಭಾಗದಲ್ಲಿ ಮಧ್ಯಾಹ್ನದ ವೇಳೆಗೆ ವಾತಾವರಣದ ಉಷ್ಣತೆ 36.5 ಡಿಗ್ರಿಯಷ್ಟು ಇದ್ದರೆ ತೇವಾಂಶ ಶೇ.38-40 ಇರುತ್ತದೆ. ಕಳೆದ ವರ್ಷ ಅಂದರೆ 2023 ರಲ್ಲಿ ಇದೇ ಅವಧಿಯಲ್ಲಿ ವಾತಾವರಣದ ಉಷ್ಣತೆ 35.5 ಡಿಗ್ರಿಯಷ್ಟು ಇದ್ದರೆ ತೇವಾಂಶ ಶೇ.15-20 ,  2೦22 ರಲ್ಲಿ ವಾತಾವರಣದ ಉಷ್ಣತೆ 34.5 ಡಿಗ್ರಿಯಷ್ಟು ಇದ್ದರೆ ತೇವಾಂಶ ಶೇ.10-20 , 2021 ರಲ್ಲಿ ವಾತಾವರಣದ ಉಷ್ಣತೆ 34 ಡಿಗ್ರಿಯಷ್ಟು ಇದ್ದರೆ ತೇವಾಂಶ ಶೇ.20-30 ,  2020 ರಲ್ಲಿ ವಾತಾವರಣದ ಉಷ್ಣತೆ 34 ಡಿಗ್ರಿಯಷ್ಟು ದಾಖಲಾಗಿತ್ತು.

The temperature is increasing day by day in the state including Bangalore. Also, drought will continue in some districts. The Meteorological Department has predicted that there is a possibility of heat wave. The Meteorological Department has predicted that the maximum and minimum temperatures in some parts of the coast are likely to rise by 2-3 degrees Celsius above normal.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…

7 hours ago

ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649

8 hours ago

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ

ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

17 hours ago

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

1 day ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

1 day ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago