Advertisement
MIRROR FOCUS

ದಿನದಿಂದ ದಿನಕ್ಕೆ ಏರುತ್ತಿದೆ ರಾಜ್ಯದಲ್ಲಿ ಉಷ್ಣಾಂಶ | ಕರಾವಳಿಯಲ್ಲಿ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ |

Share

ಈಗಿನ್ನೂ ಮಾರ್ಚ್‌ ತಿಂಗಳ ಆರಂಭ. ಈಗಲೇ  ಉರಿ ಬಿಸಿಲು(Heat) ತಡೆಯಲು ಆಗುತ್ತಿಲ್ಲ. ಇನ್ನು ಎಪ್ರಿಲ್‌, ಮೇ, ಜೂನ್‌ ತಿಂಗಳ ಕಥೆ ಏನು..? ಈ ಬಿಸಿಲ ಪ್ರಖರತೆಯನ್ನು ತಡೆದುಕೊಳ್ಳೊದು ಹೇಗೆ..? ಅನ್ನುವ ಪ್ರಶ್ನೆ ಈಗಾಗಲೇ ಎಲ್ಲರ ಮನದಲ್ಲೂ ಮೂಡಿದೆ. ಬೆಂಗಳೂರು(Bengaluru) ಸೇರಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ(Temprature) ಹೆಚ್ಚಾಗುತ್ತಲೇ ಇದೆ. ಅಲ್ಲದೇ ಕೆಲ ಜಿಲ್ಲೆಗಳಲ್ಲಿ ಒಣಹವೆ(drought) ಮುಂದುವರೆಯಲಿದೆ. ಉಷ್ಣ ಮಾರುತ( heat wave) ಏಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ(Meteorological Department) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಭಾಗದಲ್ಲೂ ವಾತಾವರಣದ ಉಷ್ಣತೆ ಏರಿಕೆಯಾಗುತ್ತಿರುವುದು ಹವಾಮಾನ ವೈಪರೀತ್ಯದ ಸ್ಪಷ್ಟ ನಿದರ್ಶನವಾಗಿದೆ.

Advertisement
Advertisement

ಕರಾವಳಿಯ(coastal) ಕೆಲವು ಕಡೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್, ಮೇ ತಿಂಗಳಿನಲ್ಲಿ ವಿಪರೀತ ಸೆಕೆಯ ಜೊತೆಗೆ ಉತ್ತರ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಉಷ್ಣ ಮಾರುತ ಏಳುವ ಸಾಧ್ಯತೆ ಇದೆ ಎಂದು ಸೂಚನೆ ನೀಡಿದೆ ಹವಾಮಾನ ಇಲಾಖೆ. ಈಗಾಗಲೇ ಉಷ್ಣಾಂಶ ಏರಿಕೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನರು ಸಂಕಷ್ಟಪಡುವಂತಾಗಿದೆ. ಮಾರ್ಚ್‍ನಲ್ಲಿ ವಾಡಿಕೆಯ ಮಳೆಯೂ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.….ಮುಂದೆ ಓದಿ…..

ಒಂದೆಡೆ ಬಿಸಿಲಿನ ಅಬ್ಬರ ದಿನೇ ದಿನೇ ಜೋರಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ತಾಪಮಾನ ತಡೆಯಲಾಗುತ್ತಿಲ್ಲ. ಇತ್ತ ಕುಡಿಯುವ ನೀರಿಗೂ ಕೊರತೆ ಉಂಟಾಗಿ ಜನಸಾಮಾನ್ಯರು ಸಮಸ್ಯೆ ಅನುಭವಿಸುವಂತಾಗಿದೆ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಪ್ರಮುಖ ಜೀವನದಿಗಳು ಈಗಾಗಲೇ ಬತ್ತಿ ಹೋಗಿವೆ. ಈ ನಡುವೆ ಉಷ್ಣ ಮಾರುತಗಳ ಭೀತಿ ಎದುರಾಗಿದ್ದು ಜನರು ಆತಂಕಪಡುವಂತೆ ಮಾಡಿದೆ. ಈ ತಿಂಗಳಲ್ಲಾದ್ರೂ ಮಳೆಯಾಗುತ್ತಾ ಎಂದು ಜನ ಕಾಯ್ತಾ ಇದ್ದಾರೆ. ಆದ್ರೆ ಬಿಸಿಲು ಹೆಚ್ಚಾಗುತ್ತಲೇ ಇದೆ. ಇನ್ನೂ ಹೆಚ್ಚಾಗಲಿದೆ ಎಂದು ಸೂಚನೆ ಸಿಕ್ಕಿದೆ.….ಮುಂದೆ ಓದಿ…..

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವಾತಾವರಣದ ಉಷ್ಣತೆ ಏರಿಕೆಯಾಗುತ್ತಿದೆ.ಕಳೆದ ಎರಡು ವರ್ಷಗಳಿಂದ ಈ ಮಾದರಿಯ ಹವಾಮಾನ ಸೃಷ್ಟಿಯಾಗುತ್ತಿದೆ. ಸುಮಾರು 5-10 ವರ್ಷಗಳ ಹಿಂದೆ ವಾತಾವರಣದ ಉಷ್ಣತೆ 35 ಡಿಗ್ರಿಗಿಂದ ಅಧಿಕವಾದರೆ ಮಲೆನಾಡು, ಕರಾವಳಿಯ ವಿವಿಧ ಕಡೆ ಮಳೆಯಾಗುತ್ತದೆ ಎನ್ನುವ ಸಾಮಾನ್ಯ ಮಾತು ಇತ್ತು. ಇದೀಗ ಎರಡು ವರ್ಷಗಳಿಂದ ವಾತಾವರಣದ ಉಷ್ಣತೆ 40 ಡಿಗ್ರಿಯಾದರೂ ಮಳೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಹೀಗಾಗಿ ದಿನದಿಂದ ದಿನಕ್ಕೆ ವಾತಾವರಣದ ಬಿಸಿ ಏರಿಕೆಯಾಗುತ್ತಿದೆ. ಇದಕ್ಕೆ ಕಾರಣಗಳು ಹಲವಾರು.

ಮಲೆನಾಡಲ್ಲಿ ತಾಪಮಾನ..
ಸದ್ಯ ಸುಬ್ರಹ್ಮಣ್ಯ ಸೇರಿದಂತೆ ಮಲೆನಾಡು ಭಾಗದಲ್ಲಿ ಮಧ್ಯಾಹ್ನದ ವೇಳೆಗೆ ವಾತಾವರಣದ ಉಷ್ಣತೆ 36.5 ಡಿಗ್ರಿಯಷ್ಟು ಇದ್ದರೆ ತೇವಾಂಶ ಶೇ.38-40 ಇರುತ್ತದೆ. ಕಳೆದ ವರ್ಷ ಅಂದರೆ 2023 ರಲ್ಲಿ ಇದೇ ಅವಧಿಯಲ್ಲಿ ವಾತಾವರಣದ ಉಷ್ಣತೆ 35.5 ಡಿಗ್ರಿಯಷ್ಟು ಇದ್ದರೆ ತೇವಾಂಶ ಶೇ.15-20 ,  2೦22 ರಲ್ಲಿ ವಾತಾವರಣದ ಉಷ್ಣತೆ 34.5 ಡಿಗ್ರಿಯಷ್ಟು ಇದ್ದರೆ ತೇವಾಂಶ ಶೇ.10-20 , 2021 ರಲ್ಲಿ ವಾತಾವರಣದ ಉಷ್ಣತೆ 34 ಡಿಗ್ರಿಯಷ್ಟು ಇದ್ದರೆ ತೇವಾಂಶ ಶೇ.20-30 ,  2020 ರಲ್ಲಿ ವಾತಾವರಣದ ಉಷ್ಣತೆ 34 ಡಿಗ್ರಿಯಷ್ಟು ದಾಖಲಾಗಿತ್ತು.

The temperature is increasing day by day in the state including Bangalore. Also, drought will continue in some districts. The Meteorological Department has predicted that there is a possibility of heat wave. The Meteorological Department has predicted that the maximum and minimum temperatures in some parts of the coast are likely to rise by 2-3 degrees Celsius above normal.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

14 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

15 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

15 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

15 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

23 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

24 hours ago