ರಾಜ್ಯದ ಕೆಲವೆಡೆ ಹೆಚ್ಚಿನ ತಾಪಮಾನ | ರಾಯಚೂರಿನಲ್ಲಿ 44 ಡಿಗ್ರಿ ದಾಖಲು | ಬಿಸಿಲ ತಾಪಕ್ಕೆ ಕೃಷಿಯೂ ತತ್ತರ | ಮಾವಿನ ಬೆಳೆಯೂ ಗಣನೀಯ ಕುಸಿತ |

March 29, 2024
11:15 PM
ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗುತ್ತಿದೆ. ಜನರು ಸಂಕಷ್ಟದಲ್ಲಿ ಬದುಕು ಸಾಗಿಸುತ್ತಿದ್ದಾರೆ.

ಬಿಸಿಲಿನ ತಾಪ ಏರಿಕೆಯಾಗುತ್ತಿದೆ. ಮಳೆಯ ಲಕ್ಷಣ ಕಾಣುತ್ತಿಲ್ಲ. ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗಿದೆ. ಇದೀಗ ರಾಯಚೂರಿನಲ್ಲಿ ಗುರುವಾರ ಗರಿಷ್ಠ ತಾಪಮಾನ ವರದಿಯಾಗಿದೆ (44.3 ಡಿಗ್ರಿ ) .ಕೊಡಗು ಜಿಲ್ಲೆಯಲ್ಲಿ ಮಾತ್ರ ಗುರುವಾರ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್‌ಕ್ಕಿಂತ ಕಡಿಮೆ (37.4 ಡಿಗ್ರಿ ) ವರದಿಯಾಗಿದೆ.

Advertisement

ಕಳೆದ ಐದು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಅಧಿಕ ತಾಪಮಾನ ಹೊಂದಿದ ವರ್ಷವಾಗಿದೆ. ರಾಜ್ಯದ ಹಲವಾರು ಭಾಗಗಳಲ್ಲಿ, ಅದರಲ್ಲಿಯೂ ಉತ್ತರ ಒಳನಾಡಿನಲ್ಲಿ 40 ಡಿಗ್ರಿ ಸೆಲ್ಸಿಯಸ್‌ಕ್ಕಿಂತ ಹೆಚ್ಚಿನ ತಾಪಮಾನ ವರದಿಯಾಗಿದೆ’ ಎಂದು ಹವಾಮಾನ ಇಲಾಖೆ ಅಧಿಕಾರಿ ಎ.ಪ್ರಸಾದ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಬಿಸಿಲಿನ ತಾಪಮಾನಕ್ಕೆ ಮಾವು ಬೆಲೆ ದುಬಾರಿಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಈ ವರ್ಷ ಮಾವಿನ ಉತ್ಪಾನೆಯಲ್ಲಿ ಶೇ. 60-70ರಷ್ಟು ಕುಸಿತವಾಗಲಿದೆ. ಈ ಬಾರಿಯ ಮಾವು ಹಂಗಾಮಿನ ಆರಂಭದಲ್ಲಿ 14ರಿಂದ 16 ಲಕ್ಷ ಮೆಟ್ರಿಕ್ ಟನ್ ಮಾವು ಇತ್ಪಾದನೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಮಾವು ಬೆಳೆಯಲ್ಲಿ ಭಾರಿ ಬದಲಾವಣೆ ಉಂಟಾಗಿದೆ. ಮಾವಿನ ಗಿಡಗಳು ಅಕಾಲಿಕವಾಗಿ ಚಿಗುರೊಡೆದು ಹೂವು, ಕಾಯಿಗಳನ್ನು ಉದುರಿಸುತ್ತಿವೆ. ಹೀಗಾಗಿ ಶೇ.70ರಷ್ಟು ಫಸಲು ನಾಶವಾಗಲಿದೆ. ರಾಮನಗರ ಹೊರತುಪಡಿಸಿದರೆ, ಇತರೆ ಜಿಲ್ಲೆಗಳಲ್ಲಿ ಮಾವು ಸಂಪೂರ್ಣ ನಾಶವಾಗಿದೆ. ಧಾರವಾಡದಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಹಾಳಾಗಿದೆ.  ರಾಮನಗರ ಹೊರತುಪಡಿಸಿ ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡದಲ್ಲೂ ಉತ್ಪಾದನೆ ಕಡಿಮೆಯಿದೆ. ಎಲ್ಲೆಡೆ ವಾತಾವರಣದಲ್ಲಿ ಶುಷ್ಕತೆಯ ಪ್ರಮಾಣ ಹೆಚ್ಚಾಗಿದ್ದು, ಭೂಮಿಯಲ್ಲಿ ತೇವಾಂಶವಿಲ್ಲದೆ ಅತಿಯಾದ ಬಿಸಿಲಿಗೆ ಮಾವು ಎರಡು ಬಾರಿ ಚಿರುರೊಡೆದಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |
April 16, 2025
10:50 AM
by: The Rural Mirror ಸುದ್ದಿಜಾಲ
ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |
April 16, 2025
8:14 AM
by: The Rural Mirror ಸುದ್ದಿಜಾಲ
ಹೊಸರುಚಿ| ಗುಜ್ಜೆ ರೋಲ್
April 16, 2025
8:00 AM
by: ದಿವ್ಯ ಮಹೇಶ್
ಅಮರನಾಥ ಯಾತ್ರೆಗೆ ನೋಂದಣಿ ಪ್ರಕ್ರಿಯೆ ಆರಂಭ | ಜೂನ್‌ 29 ರಿಂದ ಯಾತ್ರೆ ಆರಂಭ |
April 16, 2025
7:52 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group