ಬಿಸಿಲಿನ ತಾಪ ಏರಿಕೆಯಾಗುತ್ತಿದೆ. ಮಳೆಯ ಲಕ್ಷಣ ಕಾಣುತ್ತಿಲ್ಲ. ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗಿದೆ. ಇದೀಗ ರಾಯಚೂರಿನಲ್ಲಿ ಗುರುವಾರ ಗರಿಷ್ಠ ತಾಪಮಾನ ವರದಿಯಾಗಿದೆ (44.3 ಡಿಗ್ರಿ ) .ಕೊಡಗು ಜಿಲ್ಲೆಯಲ್ಲಿ ಮಾತ್ರ ಗುರುವಾರ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ಕ್ಕಿಂತ ಕಡಿಮೆ (37.4 ಡಿಗ್ರಿ ) ವರದಿಯಾಗಿದೆ.
ಕಳೆದ ಐದು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಅಧಿಕ ತಾಪಮಾನ ಹೊಂದಿದ ವರ್ಷವಾಗಿದೆ. ರಾಜ್ಯದ ಹಲವಾರು ಭಾಗಗಳಲ್ಲಿ, ಅದರಲ್ಲಿಯೂ ಉತ್ತರ ಒಳನಾಡಿನಲ್ಲಿ 40 ಡಿಗ್ರಿ ಸೆಲ್ಸಿಯಸ್ಕ್ಕಿಂತ ಹೆಚ್ಚಿನ ತಾಪಮಾನ ವರದಿಯಾಗಿದೆ’ ಎಂದು ಹವಾಮಾನ ಇಲಾಖೆ ಅಧಿಕಾರಿ ಎ.ಪ್ರಸಾದ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಬಿಸಿಲಿನ ತಾಪಮಾನಕ್ಕೆ ಮಾವು ಬೆಲೆ ದುಬಾರಿಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಈ ವರ್ಷ ಮಾವಿನ ಉತ್ಪಾನೆಯಲ್ಲಿ ಶೇ. 60-70ರಷ್ಟು ಕುಸಿತವಾಗಲಿದೆ. ಈ ಬಾರಿಯ ಮಾವು ಹಂಗಾಮಿನ ಆರಂಭದಲ್ಲಿ 14ರಿಂದ 16 ಲಕ್ಷ ಮೆಟ್ರಿಕ್ ಟನ್ ಮಾವು ಇತ್ಪಾದನೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಮಾವು ಬೆಳೆಯಲ್ಲಿ ಭಾರಿ ಬದಲಾವಣೆ ಉಂಟಾಗಿದೆ. ಮಾವಿನ ಗಿಡಗಳು ಅಕಾಲಿಕವಾಗಿ ಚಿಗುರೊಡೆದು ಹೂವು, ಕಾಯಿಗಳನ್ನು ಉದುರಿಸುತ್ತಿವೆ. ಹೀಗಾಗಿ ಶೇ.70ರಷ್ಟು ಫಸಲು ನಾಶವಾಗಲಿದೆ. ರಾಮನಗರ ಹೊರತುಪಡಿಸಿದರೆ, ಇತರೆ ಜಿಲ್ಲೆಗಳಲ್ಲಿ ಮಾವು ಸಂಪೂರ್ಣ ನಾಶವಾಗಿದೆ. ಧಾರವಾಡದಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಹಾಳಾಗಿದೆ. ರಾಮನಗರ ಹೊರತುಪಡಿಸಿ ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡದಲ್ಲೂ ಉತ್ಪಾದನೆ ಕಡಿಮೆಯಿದೆ. ಎಲ್ಲೆಡೆ ವಾತಾವರಣದಲ್ಲಿ ಶುಷ್ಕತೆಯ ಪ್ರಮಾಣ ಹೆಚ್ಚಾಗಿದ್ದು, ಭೂಮಿಯಲ್ಲಿ ತೇವಾಂಶವಿಲ್ಲದೆ ಅತಿಯಾದ ಬಿಸಿಲಿಗೆ ಮಾವು ಎರಡು ಬಾರಿ ಚಿರುರೊಡೆದಿದೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…