Advertisement
MIRROR FOCUS

ರಾಜ್ಯದ ಕೆಲವೆಡೆ ಹೆಚ್ಚಿನ ತಾಪಮಾನ | ರಾಯಚೂರಿನಲ್ಲಿ 44 ಡಿಗ್ರಿ ದಾಖಲು | ಬಿಸಿಲ ತಾಪಕ್ಕೆ ಕೃಷಿಯೂ ತತ್ತರ | ಮಾವಿನ ಬೆಳೆಯೂ ಗಣನೀಯ ಕುಸಿತ |

Share

ಬಿಸಿಲಿನ ತಾಪ ಏರಿಕೆಯಾಗುತ್ತಿದೆ. ಮಳೆಯ ಲಕ್ಷಣ ಕಾಣುತ್ತಿಲ್ಲ. ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗಿದೆ. ಇದೀಗ ರಾಯಚೂರಿನಲ್ಲಿ ಗುರುವಾರ ಗರಿಷ್ಠ ತಾಪಮಾನ ವರದಿಯಾಗಿದೆ (44.3 ಡಿಗ್ರಿ ) .ಕೊಡಗು ಜಿಲ್ಲೆಯಲ್ಲಿ ಮಾತ್ರ ಗುರುವಾರ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್‌ಕ್ಕಿಂತ ಕಡಿಮೆ (37.4 ಡಿಗ್ರಿ ) ವರದಿಯಾಗಿದೆ.

ಕಳೆದ ಐದು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಅಧಿಕ ತಾಪಮಾನ ಹೊಂದಿದ ವರ್ಷವಾಗಿದೆ. ರಾಜ್ಯದ ಹಲವಾರು ಭಾಗಗಳಲ್ಲಿ, ಅದರಲ್ಲಿಯೂ ಉತ್ತರ ಒಳನಾಡಿನಲ್ಲಿ 40 ಡಿಗ್ರಿ ಸೆಲ್ಸಿಯಸ್‌ಕ್ಕಿಂತ ಹೆಚ್ಚಿನ ತಾಪಮಾನ ವರದಿಯಾಗಿದೆ’ ಎಂದು ಹವಾಮಾನ ಇಲಾಖೆ ಅಧಿಕಾರಿ ಎ.ಪ್ರಸಾದ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಬಿಸಿಲಿನ ತಾಪಮಾನಕ್ಕೆ ಮಾವು ಬೆಲೆ ದುಬಾರಿಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಈ ವರ್ಷ ಮಾವಿನ ಉತ್ಪಾನೆಯಲ್ಲಿ ಶೇ. 60-70ರಷ್ಟು ಕುಸಿತವಾಗಲಿದೆ. ಈ ಬಾರಿಯ ಮಾವು ಹಂಗಾಮಿನ ಆರಂಭದಲ್ಲಿ 14ರಿಂದ 16 ಲಕ್ಷ ಮೆಟ್ರಿಕ್ ಟನ್ ಮಾವು ಇತ್ಪಾದನೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಮಾವು ಬೆಳೆಯಲ್ಲಿ ಭಾರಿ ಬದಲಾವಣೆ ಉಂಟಾಗಿದೆ. ಮಾವಿನ ಗಿಡಗಳು ಅಕಾಲಿಕವಾಗಿ ಚಿಗುರೊಡೆದು ಹೂವು, ಕಾಯಿಗಳನ್ನು ಉದುರಿಸುತ್ತಿವೆ. ಹೀಗಾಗಿ ಶೇ.70ರಷ್ಟು ಫಸಲು ನಾಶವಾಗಲಿದೆ. ರಾಮನಗರ ಹೊರತುಪಡಿಸಿದರೆ, ಇತರೆ ಜಿಲ್ಲೆಗಳಲ್ಲಿ ಮಾವು ಸಂಪೂರ್ಣ ನಾಶವಾಗಿದೆ. ಧಾರವಾಡದಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಹಾಳಾಗಿದೆ.  ರಾಮನಗರ ಹೊರತುಪಡಿಸಿ ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡದಲ್ಲೂ ಉತ್ಪಾದನೆ ಕಡಿಮೆಯಿದೆ. ಎಲ್ಲೆಡೆ ವಾತಾವರಣದಲ್ಲಿ ಶುಷ್ಕತೆಯ ಪ್ರಮಾಣ ಹೆಚ್ಚಾಗಿದ್ದು, ಭೂಮಿಯಲ್ಲಿ ತೇವಾಂಶವಿಲ್ಲದೆ ಅತಿಯಾದ ಬಿಸಿಲಿಗೆ ಮಾವು ಎರಡು ಬಾರಿ ಚಿರುರೊಡೆದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

44 minutes ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

5 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago