ಬಿಸಿಲಿನ ತಾಪ ಏರಿಕೆಯಾಗುತ್ತಿದೆ. ಮಳೆಯ ಲಕ್ಷಣ ಕಾಣುತ್ತಿಲ್ಲ. ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗಿದೆ. ಇದೀಗ ರಾಯಚೂರಿನಲ್ಲಿ ಗುರುವಾರ ಗರಿಷ್ಠ ತಾಪಮಾನ ವರದಿಯಾಗಿದೆ (44.3 ಡಿಗ್ರಿ ) .ಕೊಡಗು ಜಿಲ್ಲೆಯಲ್ಲಿ ಮಾತ್ರ ಗುರುವಾರ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ಕ್ಕಿಂತ ಕಡಿಮೆ (37.4 ಡಿಗ್ರಿ ) ವರದಿಯಾಗಿದೆ.
ಕಳೆದ ಐದು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಅಧಿಕ ತಾಪಮಾನ ಹೊಂದಿದ ವರ್ಷವಾಗಿದೆ. ರಾಜ್ಯದ ಹಲವಾರು ಭಾಗಗಳಲ್ಲಿ, ಅದರಲ್ಲಿಯೂ ಉತ್ತರ ಒಳನಾಡಿನಲ್ಲಿ 40 ಡಿಗ್ರಿ ಸೆಲ್ಸಿಯಸ್ಕ್ಕಿಂತ ಹೆಚ್ಚಿನ ತಾಪಮಾನ ವರದಿಯಾಗಿದೆ’ ಎಂದು ಹವಾಮಾನ ಇಲಾಖೆ ಅಧಿಕಾರಿ ಎ.ಪ್ರಸಾದ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಬಿಸಿಲಿನ ತಾಪಮಾನಕ್ಕೆ ಮಾವು ಬೆಲೆ ದುಬಾರಿಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಈ ವರ್ಷ ಮಾವಿನ ಉತ್ಪಾನೆಯಲ್ಲಿ ಶೇ. 60-70ರಷ್ಟು ಕುಸಿತವಾಗಲಿದೆ. ಈ ಬಾರಿಯ ಮಾವು ಹಂಗಾಮಿನ ಆರಂಭದಲ್ಲಿ 14ರಿಂದ 16 ಲಕ್ಷ ಮೆಟ್ರಿಕ್ ಟನ್ ಮಾವು ಇತ್ಪಾದನೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಮಾವು ಬೆಳೆಯಲ್ಲಿ ಭಾರಿ ಬದಲಾವಣೆ ಉಂಟಾಗಿದೆ. ಮಾವಿನ ಗಿಡಗಳು ಅಕಾಲಿಕವಾಗಿ ಚಿಗುರೊಡೆದು ಹೂವು, ಕಾಯಿಗಳನ್ನು ಉದುರಿಸುತ್ತಿವೆ. ಹೀಗಾಗಿ ಶೇ.70ರಷ್ಟು ಫಸಲು ನಾಶವಾಗಲಿದೆ. ರಾಮನಗರ ಹೊರತುಪಡಿಸಿದರೆ, ಇತರೆ ಜಿಲ್ಲೆಗಳಲ್ಲಿ ಮಾವು ಸಂಪೂರ್ಣ ನಾಶವಾಗಿದೆ. ಧಾರವಾಡದಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಹಾಳಾಗಿದೆ. ರಾಮನಗರ ಹೊರತುಪಡಿಸಿ ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡದಲ್ಲೂ ಉತ್ಪಾದನೆ ಕಡಿಮೆಯಿದೆ. ಎಲ್ಲೆಡೆ ವಾತಾವರಣದಲ್ಲಿ ಶುಷ್ಕತೆಯ ಪ್ರಮಾಣ ಹೆಚ್ಚಾಗಿದ್ದು, ಭೂಮಿಯಲ್ಲಿ ತೇವಾಂಶವಿಲ್ಲದೆ ಅತಿಯಾದ ಬಿಸಿಲಿಗೆ ಮಾವು ಎರಡು ಬಾರಿ ಚಿರುರೊಡೆದಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…