Advertisement
MIRROR FOCUS

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

Share

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ ಮಳೆಯಾಗುತ್ತಿದ್ದು(Rain), ಪ್ರವಾಹ(Flood) ಮತ್ತು ಭೂಕುಸಿತದಿಂದ(Land slide) ಜನತೆ ಕಂಗೆಟ್ಟಿದ್ದಾರೆ. ದೇಶದಲ್ಲಿ ಇದುವರೆಗೂ 155 ಜನರು ಸಾವಿಗೀಡಾಗಿದ್ದು, 236 ಮಂದಿ ಗಾಯಗೊಂಡಿದ್ದಾರೆ. ಪೂರ್ವ ಆಫ್ರಿಕಾದಾದ್ಯಂತ (East Africa) ತೀವ್ರವಾದ ಮಳೆ ಮುಂದುವರಿದಿದೆ.

ಎಲ್ ನಿನೋ(L Nino) ಹವಾಮಾನದ ಮಾದರಿಯು ಭಾರೀ ಮಳೆಗೆ ಕಾರಣವಾಗಿದೆ. ಇದರಿಂದಾಗಿ ಪ್ರವಾಹ ಹೆಚ್ಚಾಗಿದೆ. ರಸ್ತೆಗಳು, ಸೇತುವೆಗಳು ಮತ್ತು ರೈಲು ಮಾರ್ಗಗಳು ನಾಶವಾಗಿವೆ ಎಂದು ಪ್ರಧಾನಿ ಕಾಸಿಮ್ ಮಜಲಿವಾ ತಿಳಿಸಿದ್ದಾರೆ.  ಪ್ರವಾಹದಿಂದ 51,000 ಮನೆಗಳಿಗೆ ಹಾನಿಯಾಗಿದೆ. 2 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಶಾಲೆಗಳನ್ನು ಮುಚ್ಚಲಾಗಿದೆ. ಜನರ ರಕ್ಷಣೆಗೆ ತುರ್ತು ಸೇವೆ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ತಗ್ಗು ಪ್ರದೇಶಗಳಲ್ಲಿ ವಾಸಿಸುವವರಿಗೆ ಎತ್ತರದ ಪ್ರದೇಶಗಳಿಗೆ ತೆರಳುವಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಮನೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವವರಿಗೆ ಸೂಕ್ತ ನೆರವು ಒದಗಿಸುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರಸ್ತುತ ಮಳೆಗಾಲದಲ್ಲಿ ಪೂರ್ವ ಆಫ್ರಿಕಾದ ಪ್ರದೇಶವು ವಾಡಿಕೆಗಿಂತ ಹೆಚ್ಚಿನ ಮಳೆಯಿಂದ ಜರ್ಜರಿತವಾಗಿದೆ. ನೆರೆಯ ಬುರುಂಡಿ ಮತ್ತು ಕೀನ್ಯಾದಲ್ಲಿ ಸಹ ಪ್ರವಾಹ ವರದಿಯಾಗಿದೆ.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

5 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

7 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

14 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

22 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

23 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago