Advertisement
MIRROR FOCUS

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

Share

ಸತತವಾಗಿ 14 ದಿನಗಳ ಕಾಲ ತಾಪಮಾನ 40 ಡಿಗ್ರಿ ದಾಟಿದೆ. ಹೀಗಾಗಿ ಅಡಿಕೆಯ ಮೇಲೆ ಪರಿಣಾಮ ಬೀರಿದೆ. ಈಗ ಎಳೆ ಅಡಿಕೆ ಬೀಳುತ್ತಿದೆ. ಇನ್ನೀಗ ಮಳೆಯಾದ ತಕ್ಷಣವೇ ಅಂದರೆ ವಾತಾವರಣ ತಂಪಾದ ಕೂಡಲೇ ಇನ್ನೊಂದಿಷ್ಟು ಎಳೆ  ಎಡಿಕೆ ಬೀಳಲಿದೆ. ಈಗಲೇ ಮಳೆಯಾದರೆ ಸ್ವಲ್ಪ ಅಡಿಕೆ ಉಳಿದೀತು. ಹೀಗಾಗಿ ಈ ಬಾರಿಯ ತಾಪಮಾನ ಅಡಿಕೆ ಬೆಳೆಗಾರರಿಗೆ ತೀವ್ರ ಸಂಕಷ್ಟ ತಂದಿದೆ.

ಕರಾವಳಿ ಜಿಲ್ಲೆಯಲ್ಲಿ ಈ ಬಾರಿ ವಿಪರೀತವಾಗಿ ತಾಪಮಾನ ಏರಿಕೆ ಕಂಡಿದೆ. ಎಪ್ರಿಲ್‌ ಮೊದಲ ವಾರದಲ್ಲಿ  36-37 ಡಿಗ್ರಿಯ ತಾಪಮಾನ  ಇದ್ದರೆ ಎಪ್ರಿಲ್‌ ಎರಡನೇ ವಾರ ತಾಪಮಾನ 40 ಡಿಗ್ರಿಗೆ ತಲಪಿತ್ತು. ಅಂದಿನಿಂದ ಏರಿದ ತಾಪಮಾನ ಇಂದಿನವರೆಗೂ ಇಳಿಕೆಯಾಗಿಲ್ಲ. ಸತತವಾಗಿ 40-42 ಡಿಗ್ರಿ ತಾಪಮಾನ ಕಂಡುಬಂದಿದೆ. ಎಪ್ರಿಲ್‌ ಮೊದಲ ವಾರದಿಂದ 36 ಡಿಗ್ರಿಗಿಂತ ಕಡಿಮೆ ತಾಪಮಾನ ಬಂದಿಲ್ಲ.

ಅಡಿಕೆಗೆ ಸಾಮಾನ್ಯವಾಗಿ 35-37 ಡಿಗ್ರಿ ತಾಪಮಾನ ಇದ್ದರೆ ಮಾತ್ರವೇ ಎಳೆ ಅಡಿಕೆ ಶಕ್ತಿಯುತವಾಗಿ ಬೆಳೆಯುತ್ತದೆ. ತಾಪಮಾನಕ್ಕೆ ಬಾಡುವುದಿಲ್ಲ.‌ ಹಿಂಗಾರ ಅರಳಿ ಸರಿಯಾಗಿ ಕಾಯಿ ಕಟ್ಟುತ್ತದೆ. ಅಲ್ಲದೇ ಇದ್ದರೆ ಅಡಿಕೆ ಸರಿಯಾಗಿ ಕಾಯಿ ಕಟ್ಟುವುದಿಲ್ಲ ಅಂದರೆ ಪ್ರುಟ್‌ ಸೆಟ್‌ ಆಗುವುದಿಲ್ಲ. ಯಾವ ಔಷಧಿಗಳು ಸಿಂಪಡಣೆ ಮಾಡಿದರೂ ಅಡಿಕೆ ಕಾಯಿ ಕುಟ್ಟುವಲ್ಲಿ ಸಫಲತೆ ಕಾಣುವುದಿಲ್ಲ. ಈ ಬಾರಿ ಅಂತಹದ್ದೇ ವಾತಾವರಣ ಸೃಷ್ಟಿಯಾಗಿದೆ. ಸತತವಾಗಿ ತಾಪಮಾನ 40 ಡಿಗ್ರಿ ಇದ್ದ ಕಾರಣ ಎಳೆ ಅಡಿಕೆ ಬಾಡಿದೆ. ಈಗಾಗಲೇ ಹಲವು ಕಡೆ ಬಿದ್ದಿದೆ, ಬೀಳುತ್ತಿದೆ. ಇದೀಗ ವಾತಾವರಣದ ಉಷ್ಣತೆ 35 ಡಿಗ್ರಿಗಿಂತ ಕಡಿಮೆಯಾದ ತಕ್ಷಣವೇ ಮರದಲ್ಲಿ ತಾಪಮಾನದಿಂದ ಬಾಡಿ ಎಳೆ ಅಡಿಕೆ ಬೀಳುವುದೂ ಇದೆ. ಈಗಾಗಲೇ ಶೇ.25 ರಷ್ಟು ಎಳೆ ಅಡಿಕೆ ಬಿದ್ದರೆ, ಮುಂದೆ ಮಳೆಯಾದ ಕೂಡಲೇ ಇನ್ನೂ 25 ಶೇ ಅಡಿಕೆ ಬೀಳುವ ಸಾಧ್ಯತೆ ಇದೆ. ಇದು ಅಡಿಕೆ ಫಸಲಿನ ಮೇಲೆ ಪರಿಣಾಮ ಬೀರಲಿದೆ.

ಅಡಿಕೆ ತೋಟದ ಒಳಗೆ ತಂಪು ವಾತಾವರಣ ಇರುತ್ತದೆ. ಆದರೆ ಈಗ ಬಿಸಿ ವಾತಾವರಣ ಇದೆ. ಅಡಿಕೆ ಮರದ ಬುಡಕ್ಕೆ ಎಷ್ಟೇ ನೀರು ಹಾಯಿಸಿದರೂ ಬುಡ ಮಾತ್ರ ತಂಪಾಗುತ್ತಿದೆ  ಹೊರತು ಹೊರಗಿನ ವಾತಾವರಣ ತಂಪಾಗಿಲ್ಲ.  ಬಿಸಿಲಿನಿಂದ ಇಡೀ ಮರವೇ ಸುಟ್ಟಂತಾಗುತ್ತಿದೆ. ಹೆಚ್ಚಿನ ತೋಟಗಳಲ್ಲಿ ಹಿಂಗಾರ ಕರಟಿ ಹೋಗಿ ಫಸಲೇ ಶೂನ್ಯವಾಗಿದೆ.

ಸಾಮಾನ್ಯವಾಗಿ ಆರು ಕಾರಣಗಳಿಂದಾಗಿ ನಳ್ಳಿ ಉದುರುತ್ತದೆ ಎನ್ನುವುದು ಅಧಿಕಾರಿಗಳ ಅಭಿಪ್ರಾಯ. ಉಷ್ಣ ತಾಪಮಾನ, ಮರಗಳ ಶಕ್ತಿ ಸಾಮರ್ಥ್ಯ, ಕೀಟಬಾಧೆ, ಶಿಲೀಂಧ್ರಗಳು, ರೋಗರುಜಿನ, ಪೋಷಕಾಂಶಗಳ ಕೊರತೆ. ಈ ಬಾರಿ ತಾಪಮಾನವೇ ನೇರ ಕಾರಣ. ರೋಗ ರುಜಿನಗಳಿಗೆ ಔಷಧ ಸಿಂಪಡಿಸಿ ಆದರೂ ಪರಿಹಾರ ಕಂಡುಕೊಳ್ಳಬಹುದು. ಆದರೆ ಬಿಸಿಲಿನ ಧಗೆಗೆ ಪರಿಹಾರ ಇಲ್ಲ. ಮಳೆ ಆರಂಭದಲ್ಲಿ ಕೀಟಗಳೂ ಅಡಿಕೆಗೆ ಬಾಧಿಸುತ್ತವೆ. ಹೀಗಾಗಿ ಆಗಲೂ ಎಚ್ಚರಿಕೆ ಅಗತ್ಯ ಇದೆ.

Due to continuous high temperature , the Arecanut crop is in problem. The nut is falling. It is estimated that 50% of the Arecanut crop will be lost.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

37 minutes ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

1 day ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago