Advertisement
MIRROR FOCUS

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

Share

ಸತತವಾಗಿ 14 ದಿನಗಳ ಕಾಲ ತಾಪಮಾನ 40 ಡಿಗ್ರಿ ದಾಟಿದೆ. ಹೀಗಾಗಿ ಅಡಿಕೆಯ ಮೇಲೆ ಪರಿಣಾಮ ಬೀರಿದೆ. ಈಗ ಎಳೆ ಅಡಿಕೆ ಬೀಳುತ್ತಿದೆ. ಇನ್ನೀಗ ಮಳೆಯಾದ ತಕ್ಷಣವೇ ಅಂದರೆ ವಾತಾವರಣ ತಂಪಾದ ಕೂಡಲೇ ಇನ್ನೊಂದಿಷ್ಟು ಎಳೆ  ಎಡಿಕೆ ಬೀಳಲಿದೆ. ಈಗಲೇ ಮಳೆಯಾದರೆ ಸ್ವಲ್ಪ ಅಡಿಕೆ ಉಳಿದೀತು. ಹೀಗಾಗಿ ಈ ಬಾರಿಯ ತಾಪಮಾನ ಅಡಿಕೆ ಬೆಳೆಗಾರರಿಗೆ ತೀವ್ರ ಸಂಕಷ್ಟ ತಂದಿದೆ.

ಕರಾವಳಿ ಜಿಲ್ಲೆಯಲ್ಲಿ ಈ ಬಾರಿ ವಿಪರೀತವಾಗಿ ತಾಪಮಾನ ಏರಿಕೆ ಕಂಡಿದೆ. ಎಪ್ರಿಲ್‌ ಮೊದಲ ವಾರದಲ್ಲಿ  36-37 ಡಿಗ್ರಿಯ ತಾಪಮಾನ  ಇದ್ದರೆ ಎಪ್ರಿಲ್‌ ಎರಡನೇ ವಾರ ತಾಪಮಾನ 40 ಡಿಗ್ರಿಗೆ ತಲಪಿತ್ತು. ಅಂದಿನಿಂದ ಏರಿದ ತಾಪಮಾನ ಇಂದಿನವರೆಗೂ ಇಳಿಕೆಯಾಗಿಲ್ಲ. ಸತತವಾಗಿ 40-42 ಡಿಗ್ರಿ ತಾಪಮಾನ ಕಂಡುಬಂದಿದೆ. ಎಪ್ರಿಲ್‌ ಮೊದಲ ವಾರದಿಂದ 36 ಡಿಗ್ರಿಗಿಂತ ಕಡಿಮೆ ತಾಪಮಾನ ಬಂದಿಲ್ಲ.

ಅಡಿಕೆಗೆ ಸಾಮಾನ್ಯವಾಗಿ 35-37 ಡಿಗ್ರಿ ತಾಪಮಾನ ಇದ್ದರೆ ಮಾತ್ರವೇ ಎಳೆ ಅಡಿಕೆ ಶಕ್ತಿಯುತವಾಗಿ ಬೆಳೆಯುತ್ತದೆ. ತಾಪಮಾನಕ್ಕೆ ಬಾಡುವುದಿಲ್ಲ.‌ ಹಿಂಗಾರ ಅರಳಿ ಸರಿಯಾಗಿ ಕಾಯಿ ಕಟ್ಟುತ್ತದೆ. ಅಲ್ಲದೇ ಇದ್ದರೆ ಅಡಿಕೆ ಸರಿಯಾಗಿ ಕಾಯಿ ಕಟ್ಟುವುದಿಲ್ಲ ಅಂದರೆ ಪ್ರುಟ್‌ ಸೆಟ್‌ ಆಗುವುದಿಲ್ಲ. ಯಾವ ಔಷಧಿಗಳು ಸಿಂಪಡಣೆ ಮಾಡಿದರೂ ಅಡಿಕೆ ಕಾಯಿ ಕುಟ್ಟುವಲ್ಲಿ ಸಫಲತೆ ಕಾಣುವುದಿಲ್ಲ. ಈ ಬಾರಿ ಅಂತಹದ್ದೇ ವಾತಾವರಣ ಸೃಷ್ಟಿಯಾಗಿದೆ. ಸತತವಾಗಿ ತಾಪಮಾನ 40 ಡಿಗ್ರಿ ಇದ್ದ ಕಾರಣ ಎಳೆ ಅಡಿಕೆ ಬಾಡಿದೆ. ಈಗಾಗಲೇ ಹಲವು ಕಡೆ ಬಿದ್ದಿದೆ, ಬೀಳುತ್ತಿದೆ. ಇದೀಗ ವಾತಾವರಣದ ಉಷ್ಣತೆ 35 ಡಿಗ್ರಿಗಿಂತ ಕಡಿಮೆಯಾದ ತಕ್ಷಣವೇ ಮರದಲ್ಲಿ ತಾಪಮಾನದಿಂದ ಬಾಡಿ ಎಳೆ ಅಡಿಕೆ ಬೀಳುವುದೂ ಇದೆ. ಈಗಾಗಲೇ ಶೇ.25 ರಷ್ಟು ಎಳೆ ಅಡಿಕೆ ಬಿದ್ದರೆ, ಮುಂದೆ ಮಳೆಯಾದ ಕೂಡಲೇ ಇನ್ನೂ 25 ಶೇ ಅಡಿಕೆ ಬೀಳುವ ಸಾಧ್ಯತೆ ಇದೆ. ಇದು ಅಡಿಕೆ ಫಸಲಿನ ಮೇಲೆ ಪರಿಣಾಮ ಬೀರಲಿದೆ.

ಅಡಿಕೆ ತೋಟದ ಒಳಗೆ ತಂಪು ವಾತಾವರಣ ಇರುತ್ತದೆ. ಆದರೆ ಈಗ ಬಿಸಿ ವಾತಾವರಣ ಇದೆ. ಅಡಿಕೆ ಮರದ ಬುಡಕ್ಕೆ ಎಷ್ಟೇ ನೀರು ಹಾಯಿಸಿದರೂ ಬುಡ ಮಾತ್ರ ತಂಪಾಗುತ್ತಿದೆ  ಹೊರತು ಹೊರಗಿನ ವಾತಾವರಣ ತಂಪಾಗಿಲ್ಲ.  ಬಿಸಿಲಿನಿಂದ ಇಡೀ ಮರವೇ ಸುಟ್ಟಂತಾಗುತ್ತಿದೆ. ಹೆಚ್ಚಿನ ತೋಟಗಳಲ್ಲಿ ಹಿಂಗಾರ ಕರಟಿ ಹೋಗಿ ಫಸಲೇ ಶೂನ್ಯವಾಗಿದೆ.

ಸಾಮಾನ್ಯವಾಗಿ ಆರು ಕಾರಣಗಳಿಂದಾಗಿ ನಳ್ಳಿ ಉದುರುತ್ತದೆ ಎನ್ನುವುದು ಅಧಿಕಾರಿಗಳ ಅಭಿಪ್ರಾಯ. ಉಷ್ಣ ತಾಪಮಾನ, ಮರಗಳ ಶಕ್ತಿ ಸಾಮರ್ಥ್ಯ, ಕೀಟಬಾಧೆ, ಶಿಲೀಂಧ್ರಗಳು, ರೋಗರುಜಿನ, ಪೋಷಕಾಂಶಗಳ ಕೊರತೆ. ಈ ಬಾರಿ ತಾಪಮಾನವೇ ನೇರ ಕಾರಣ. ರೋಗ ರುಜಿನಗಳಿಗೆ ಔಷಧ ಸಿಂಪಡಿಸಿ ಆದರೂ ಪರಿಹಾರ ಕಂಡುಕೊಳ್ಳಬಹುದು. ಆದರೆ ಬಿಸಿಲಿನ ಧಗೆಗೆ ಪರಿಹಾರ ಇಲ್ಲ. ಮಳೆ ಆರಂಭದಲ್ಲಿ ಕೀಟಗಳೂ ಅಡಿಕೆಗೆ ಬಾಧಿಸುತ್ತವೆ. ಹೀಗಾಗಿ ಆಗಲೂ ಎಚ್ಚರಿಕೆ ಅಗತ್ಯ ಇದೆ.

Due to continuous high temperature , the Arecanut crop is in problem. The nut is falling. It is estimated that 50% of the Arecanut crop will be lost.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

3 hours ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

3 hours ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

3 hours ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

4 hours ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

13 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

16 hours ago