MIRROR FOCUS

ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ

Share

ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಮತ್ತು ಬಿಸಿಗಾಳಿ ಬೀಸುವ ಸಂಭವವಿದೆ. ಇದರಿಂದ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ ತಿಳಿಸಿದ್ದಾರೆ.

ರಾಷ್ಟ್ರೀಯ ಹಾಗೂ ರಾಜ್ಯ ಹವಾಮಾನ ಇಲಾಖೆ ಸೂಚನೆಯಂತೆ ಜಿಲ್ಲೆಯಲ್ಲಿ ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ವರೆಗೂ ತಲುಪುವ ಸಂಭವವಿರುತ್ತದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಹೀಗಾಗಿ ಮುನ್ನೆಚ್ಚರಿಕೆಯ ಭಾಗವಾಗಿ ಜಿಲ್ಲಾಡಳಿತದ ಸಲಹೆಗಳನ್ನು ಸಾರ್ವಜನಿಕರು ಪಾಲಿಸಬೇಕು ಎಂದರು. ಬಿಸಿಗಾಳಿಯಿಂದ ರಕ್ಷಣೆ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಆದಷ್ಟು ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ, ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರು ಕುಡಿಯಿರಿ, ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸುವಂತೆ ಅವರು ಸಲಹೆ ನೀಡಿದ್ದಾರೆ. ದೇಹವನ್ನು ನಿರ್ಜಲೀಕರಣಗೊಳಿಸುವ ಮದ್ಯ, ಕಾರ್ಬೋನೇಟೆಡ್ ತಂಪು ಪಾನೀಯ, ಚಹಾ, ಕಾಫಿ ಮತ್ತು ಹೆಚ್ಚಿನ ಪ್ರೋಟೀನ್ ಆಹಾರವನ್ನು ಸೇವಿಸದಿರಿ. ಬಿಸಿಲಿನಲ್ಲಿ ಹೋಗುವಾಗ ಛತ್ರಿ, ಟೋಪಿ, ಬೂಟುಗಳು ಅಥವಾ ಚಪ್ಪಲ್‌ಗಳನ್ನು ಬಳಸಿ, ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕಗಳನ್ನು ತಪ್ಪಿಸಿ ಎಂದು ಯಾದಗಿರಿ ಜಿಲ್ಲಾಧಿಕಾರಿ ಸಲಹೆ ನೀಡಿದ್ದಾರೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…

2 hours ago

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…

3 hours ago

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…

3 hours ago

ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…

3 hours ago

ಎಫ್‌ಪಿಒ ಗಳಿಗೆ ರಾಜ್ಯ ಸರ್ಕಾರದಿಂದ ನೆರವು

ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…

3 hours ago

ಜಾನುವಾರು ಗಣತಿ | ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಥಮ | 2.90 ಲಕ್ಷ ರೈತರು ಪಶುಸಂಗೋಪನೆಯಲ್ಲಿ |

21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ…

3 hours ago