ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |

April 10, 2025
8:13 AM
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು ಒಡಿಶಾ ಸೇರಿದಂತೆ ಉತ್ತರ, ಪೂರ್ವ, ಮಧ್ಯ ಮತ್ತು ಪಶ್ಚಿಮ ಭಾರತದ ಕೆಲವು ಭಾಗಗಳಲ್ಲಿ ಶಾಖದ ಅಲೆಯ ಪರಿಸ್ಥಿತಿ ಮುಂದುವರಿಯಲಿದೆ ಎಂದು ಇಲಾಖೆ ಎಚ್ಚರಿಸಿದೆ .

ಭಾರತದಾದ್ಯಂತ ಅನೇಕ ನಗರಗಳು 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನವನ್ನು ಈ ವಾರ ದಾಖಲಿಸಿದೆ. ಬೇಸಿಗೆಯ ಆರಂಭಿಕ ತಾಪಮಾನವು ಬಿಸಿಗಾಳಿಯನ್ನೇ ಸೃಷ್ಟಿಸಿದೆ, ಹೀಟ್‌ ವೇವ್‌ ಎಚ್ಚರಿಕೆಗಳನ್ನು ಹವಾಮಾನ ಇಲಾಖೆ ನೀಡಿದೆ. ದೇಶದ 27 ಹವಾಮಾನ ಕೇಂದ್ರಗಳು 43 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನವನ್ನು ದಾಖಲಿಸಿದ್ದು, 19 ಸ್ಥಳಗಳಲ್ಲಿ ಶಾಖದ ಅಲೆಗಳನ್ನು ದಾಖಲಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.…..ಮುಂದೆ ಓದಿ….

Advertisement

ದೆಹಲಿಯ ಸಫ್ದರ್ಜಂಗ್‌ನಲ್ಲಿ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ರಾಜಸ್ಥಾನದ ಬಾರ್ಮರ್‌ನಲ್ಲಿ 46.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ದೇಶದ ಅತಿ ಹೆಚ್ಚು ತಾಪಮಾನವಾಗಿದೆ. ಭಾನುವಾರ ಬಾರ್ಮರ್‌ನಲ್ಲಿ 45 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಏಪ್ರಿಲ್ ಮೊದಲ ವಾರದಲ್ಲಿ ಇದು ಅತಿ ಹೆಚ್ಚು ತಾಪಮಾನ ಮತ್ತು ಸಾಮಾನ್ಯಕ್ಕಿಂತ ಸುಮಾರು 7 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ ಎಂದು ಇಲಾಖೆ ತಿಳಿಸಿದೆ.ಯಾವುದೇ  ಪ್ರದೇಶದಲ್ಲಿ  45 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನವಿದ್ದರೆ ಅದನ್ನು ತೀವ್ರ ಶಾಖದ ಅಲೆ ಎಂದು ಹೇಳಲಾಗುತ್ತದೆ. ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು ಒಡಿಶಾ ಸೇರಿದಂತೆ ಉತ್ತರ, ಪೂರ್ವ, ಮಧ್ಯ ಮತ್ತು ಪಶ್ಚಿಮ ಭಾರತದ ಕೆಲವು ಭಾಗಗಳಲ್ಲಿ ಶಾಖದ ಅಲೆಯ ಪರಿಸ್ಥಿತಿ ಮುಂದುವರಿಯಲಿದೆ ಎಂದು ಇಲಾಖೆ ಎಚ್ಚರಿಸಿದೆ .

ಉತ್ತರ ಪ್ರದೇಶ, ಜಾರ್ಖಂಡ್, ಛತ್ತೀಸ್‌ಗಢ ಮತ್ತು ಒಡಿಶಾದಂತಹ ರಾಜ್ಯಗಳು 10 ರಿಂದ 11 ದಿನಗಳ ಕಾಲ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆರಂಭಿಕ ಶಾಖದ ಅಲೆಯು ಕೃಷಿಯ ಮೇಲೆ ಪರಿಣಾಮ ಉಂಟು ಮಾಡುತ್ತದೆ. ಈ ವರ್ಷವೂ ಸೇರಿದಂತೆ ಸತತ ಮೂರನೇ ವರ್ಷವೂ ದೇಶದ ಗೋಧಿ ಬೆಳೆಗೆತಾಪಮಾನದ ಕಾರಣದಿಂದ ಸಂಕಷ್ಟವಾಗುತ್ತಿದೆ. ಕಳೆದ ವರ್ಷ, ರಾಜಸ್ಥಾನದಲ್ಲಿ 50.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದಾಗ, 40,000 ಕ್ಕೂ ಹೆಚ್ಚು ತಾಪಮಾನದ ಕಾರಣದಿಂದ ರೋಗಗಳು ಹಾಗೂ ವಿವಿಧ ಪ್ರಕರಣಗಳು ದಾಖಲಾಗಿದ್ದವು .ಸರ್ಕಾರಿ ಅಂಕಿಅಂಶಗಳ ಪ್ರಕಾರ, 2024 ರಲ್ಲಿ ಶಾಖದ ಅಲೆಯಿಂದಾಗಿ ಸುಮಾರು 150 ಜನರು ಸಾವನ್ನಪ್ಪಿದರು. ಈ ಬಾರಿ ಎಚ್ಚರಿಕೆಯ ಅಗತ್ಯ ಇದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರ ಉತ್ಪನ್ನಗಳ ಪ್ರದರ್ಶನ ಮಾರಾಟ ಮೇಳ | ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ ಸಂಪಾಜೆ ಮೋಹಿನಿ ವಿಶ್ವನಾಥ್ ಅವರಿಗೆ
April 24, 2025
9:47 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-04-2025 | ಎ.26 ರಿಂದ ರಾಜ್ಯದ ವಿವಿದೆಡೆ ಮಳೆ ಪ್ರಮಾಣ ಹೆಚ್ಚಳ |
April 24, 2025
9:22 PM
by: ಸಾಯಿಶೇಖರ್ ಕರಿಕಳ
ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು
April 24, 2025
6:45 AM
by: The Rural Mirror ಸುದ್ದಿಜಾಲ
ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ
April 24, 2025
6:29 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group