ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |

April 10, 2025
8:13 AM
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು ಒಡಿಶಾ ಸೇರಿದಂತೆ ಉತ್ತರ, ಪೂರ್ವ, ಮಧ್ಯ ಮತ್ತು ಪಶ್ಚಿಮ ಭಾರತದ ಕೆಲವು ಭಾಗಗಳಲ್ಲಿ ಶಾಖದ ಅಲೆಯ ಪರಿಸ್ಥಿತಿ ಮುಂದುವರಿಯಲಿದೆ ಎಂದು ಇಲಾಖೆ ಎಚ್ಚರಿಸಿದೆ .

ಭಾರತದಾದ್ಯಂತ ಅನೇಕ ನಗರಗಳು 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನವನ್ನು ಈ ವಾರ ದಾಖಲಿಸಿದೆ. ಬೇಸಿಗೆಯ ಆರಂಭಿಕ ತಾಪಮಾನವು ಬಿಸಿಗಾಳಿಯನ್ನೇ ಸೃಷ್ಟಿಸಿದೆ, ಹೀಟ್‌ ವೇವ್‌ ಎಚ್ಚರಿಕೆಗಳನ್ನು ಹವಾಮಾನ ಇಲಾಖೆ ನೀಡಿದೆ. ದೇಶದ 27 ಹವಾಮಾನ ಕೇಂದ್ರಗಳು 43 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನವನ್ನು ದಾಖಲಿಸಿದ್ದು, 19 ಸ್ಥಳಗಳಲ್ಲಿ ಶಾಖದ ಅಲೆಗಳನ್ನು ದಾಖಲಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.…..ಮುಂದೆ ಓದಿ….

ದೆಹಲಿಯ ಸಫ್ದರ್ಜಂಗ್‌ನಲ್ಲಿ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ರಾಜಸ್ಥಾನದ ಬಾರ್ಮರ್‌ನಲ್ಲಿ 46.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ದೇಶದ ಅತಿ ಹೆಚ್ಚು ತಾಪಮಾನವಾಗಿದೆ. ಭಾನುವಾರ ಬಾರ್ಮರ್‌ನಲ್ಲಿ 45 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಏಪ್ರಿಲ್ ಮೊದಲ ವಾರದಲ್ಲಿ ಇದು ಅತಿ ಹೆಚ್ಚು ತಾಪಮಾನ ಮತ್ತು ಸಾಮಾನ್ಯಕ್ಕಿಂತ ಸುಮಾರು 7 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ ಎಂದು ಇಲಾಖೆ ತಿಳಿಸಿದೆ.ಯಾವುದೇ  ಪ್ರದೇಶದಲ್ಲಿ  45 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನವಿದ್ದರೆ ಅದನ್ನು ತೀವ್ರ ಶಾಖದ ಅಲೆ ಎಂದು ಹೇಳಲಾಗುತ್ತದೆ. ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು ಒಡಿಶಾ ಸೇರಿದಂತೆ ಉತ್ತರ, ಪೂರ್ವ, ಮಧ್ಯ ಮತ್ತು ಪಶ್ಚಿಮ ಭಾರತದ ಕೆಲವು ಭಾಗಗಳಲ್ಲಿ ಶಾಖದ ಅಲೆಯ ಪರಿಸ್ಥಿತಿ ಮುಂದುವರಿಯಲಿದೆ ಎಂದು ಇಲಾಖೆ ಎಚ್ಚರಿಸಿದೆ .

ಉತ್ತರ ಪ್ರದೇಶ, ಜಾರ್ಖಂಡ್, ಛತ್ತೀಸ್‌ಗಢ ಮತ್ತು ಒಡಿಶಾದಂತಹ ರಾಜ್ಯಗಳು 10 ರಿಂದ 11 ದಿನಗಳ ಕಾಲ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆರಂಭಿಕ ಶಾಖದ ಅಲೆಯು ಕೃಷಿಯ ಮೇಲೆ ಪರಿಣಾಮ ಉಂಟು ಮಾಡುತ್ತದೆ. ಈ ವರ್ಷವೂ ಸೇರಿದಂತೆ ಸತತ ಮೂರನೇ ವರ್ಷವೂ ದೇಶದ ಗೋಧಿ ಬೆಳೆಗೆತಾಪಮಾನದ ಕಾರಣದಿಂದ ಸಂಕಷ್ಟವಾಗುತ್ತಿದೆ. ಕಳೆದ ವರ್ಷ, ರಾಜಸ್ಥಾನದಲ್ಲಿ 50.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದಾಗ, 40,000 ಕ್ಕೂ ಹೆಚ್ಚು ತಾಪಮಾನದ ಕಾರಣದಿಂದ ರೋಗಗಳು ಹಾಗೂ ವಿವಿಧ ಪ್ರಕರಣಗಳು ದಾಖಲಾಗಿದ್ದವು .ಸರ್ಕಾರಿ ಅಂಕಿಅಂಶಗಳ ಪ್ರಕಾರ, 2024 ರಲ್ಲಿ ಶಾಖದ ಅಲೆಯಿಂದಾಗಿ ಸುಮಾರು 150 ಜನರು ಸಾವನ್ನಪ್ಪಿದರು. ಈ ಬಾರಿ ಎಚ್ಚರಿಕೆಯ ಅಗತ್ಯ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ
June 5, 2026
10:04 PM
by: ಮಿರರ್‌ ಡೆಸ್ಕ್
ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ
June 5, 2026
8:53 PM
by: ಮಿರರ್‌ ಡೆಸ್ಕ್
ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ
June 5, 2026
8:20 PM
by: ಪ್ರಬಂಧ ಅಂಬುತೀರ್ಥ
ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ
June 5, 2026
8:06 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror