ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |

April 10, 2025
8:13 AM
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು ಒಡಿಶಾ ಸೇರಿದಂತೆ ಉತ್ತರ, ಪೂರ್ವ, ಮಧ್ಯ ಮತ್ತು ಪಶ್ಚಿಮ ಭಾರತದ ಕೆಲವು ಭಾಗಗಳಲ್ಲಿ ಶಾಖದ ಅಲೆಯ ಪರಿಸ್ಥಿತಿ ಮುಂದುವರಿಯಲಿದೆ ಎಂದು ಇಲಾಖೆ ಎಚ್ಚರಿಸಿದೆ .

ಭಾರತದಾದ್ಯಂತ ಅನೇಕ ನಗರಗಳು 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನವನ್ನು ಈ ವಾರ ದಾಖಲಿಸಿದೆ. ಬೇಸಿಗೆಯ ಆರಂಭಿಕ ತಾಪಮಾನವು ಬಿಸಿಗಾಳಿಯನ್ನೇ ಸೃಷ್ಟಿಸಿದೆ, ಹೀಟ್‌ ವೇವ್‌ ಎಚ್ಚರಿಕೆಗಳನ್ನು ಹವಾಮಾನ ಇಲಾಖೆ ನೀಡಿದೆ. ದೇಶದ 27 ಹವಾಮಾನ ಕೇಂದ್ರಗಳು 43 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನವನ್ನು ದಾಖಲಿಸಿದ್ದು, 19 ಸ್ಥಳಗಳಲ್ಲಿ ಶಾಖದ ಅಲೆಗಳನ್ನು ದಾಖಲಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.…..ಮುಂದೆ ಓದಿ….

ದೆಹಲಿಯ ಸಫ್ದರ್ಜಂಗ್‌ನಲ್ಲಿ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ರಾಜಸ್ಥಾನದ ಬಾರ್ಮರ್‌ನಲ್ಲಿ 46.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ದೇಶದ ಅತಿ ಹೆಚ್ಚು ತಾಪಮಾನವಾಗಿದೆ. ಭಾನುವಾರ ಬಾರ್ಮರ್‌ನಲ್ಲಿ 45 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಏಪ್ರಿಲ್ ಮೊದಲ ವಾರದಲ್ಲಿ ಇದು ಅತಿ ಹೆಚ್ಚು ತಾಪಮಾನ ಮತ್ತು ಸಾಮಾನ್ಯಕ್ಕಿಂತ ಸುಮಾರು 7 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ ಎಂದು ಇಲಾಖೆ ತಿಳಿಸಿದೆ.ಯಾವುದೇ  ಪ್ರದೇಶದಲ್ಲಿ  45 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನವಿದ್ದರೆ ಅದನ್ನು ತೀವ್ರ ಶಾಖದ ಅಲೆ ಎಂದು ಹೇಳಲಾಗುತ್ತದೆ. ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು ಒಡಿಶಾ ಸೇರಿದಂತೆ ಉತ್ತರ, ಪೂರ್ವ, ಮಧ್ಯ ಮತ್ತು ಪಶ್ಚಿಮ ಭಾರತದ ಕೆಲವು ಭಾಗಗಳಲ್ಲಿ ಶಾಖದ ಅಲೆಯ ಪರಿಸ್ಥಿತಿ ಮುಂದುವರಿಯಲಿದೆ ಎಂದು ಇಲಾಖೆ ಎಚ್ಚರಿಸಿದೆ .

ಉತ್ತರ ಪ್ರದೇಶ, ಜಾರ್ಖಂಡ್, ಛತ್ತೀಸ್‌ಗಢ ಮತ್ತು ಒಡಿಶಾದಂತಹ ರಾಜ್ಯಗಳು 10 ರಿಂದ 11 ದಿನಗಳ ಕಾಲ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆರಂಭಿಕ ಶಾಖದ ಅಲೆಯು ಕೃಷಿಯ ಮೇಲೆ ಪರಿಣಾಮ ಉಂಟು ಮಾಡುತ್ತದೆ. ಈ ವರ್ಷವೂ ಸೇರಿದಂತೆ ಸತತ ಮೂರನೇ ವರ್ಷವೂ ದೇಶದ ಗೋಧಿ ಬೆಳೆಗೆತಾಪಮಾನದ ಕಾರಣದಿಂದ ಸಂಕಷ್ಟವಾಗುತ್ತಿದೆ. ಕಳೆದ ವರ್ಷ, ರಾಜಸ್ಥಾನದಲ್ಲಿ 50.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದಾಗ, 40,000 ಕ್ಕೂ ಹೆಚ್ಚು ತಾಪಮಾನದ ಕಾರಣದಿಂದ ರೋಗಗಳು ಹಾಗೂ ವಿವಿಧ ಪ್ರಕರಣಗಳು ದಾಖಲಾಗಿದ್ದವು .ಸರ್ಕಾರಿ ಅಂಕಿಅಂಶಗಳ ಪ್ರಕಾರ, 2024 ರಲ್ಲಿ ಶಾಖದ ಅಲೆಯಿಂದಾಗಿ ಸುಮಾರು 150 ಜನರು ಸಾವನ್ನಪ್ಪಿದರು. ಈ ಬಾರಿ ಎಚ್ಚರಿಕೆಯ ಅಗತ್ಯ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ
ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ
August 6, 2026
8:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror