ಈಗ ಎಲ್ಲೆಡೆಯೂ ಧರ್ಮಗಳ ನಡುವೆ ಸಂಘರ್ಷ. ಈಗಂತೂ ಹಿಜಬ್ ವಿವಾದ. ಈ ನಡುವೆಯೂ ಸಾಮರಸ್ಯ ತಲೆ ಎತ್ತಿ ನಿಲ್ಲುತ್ತದೆ. ಈಚೆಗೆ ಉಪ್ಪಿನಂಗಡಿಯ ವಿಡಿಯೋ ವೈರಲ್ ಆಗಿರುವ ಬೆನ್ನಿಗೇ ಇದೊಂದು ಸಂಗತಿ ಗಮನ ಸೆಳೆದಿದೆ. ಮುಸ್ಲಿಂ ಉದ್ಯಮಿಯೊಬ್ಬರು ಕೃಷ್ಣನ ದೇಗುಲ ನಿರ್ಮಿಸುವ ಮೂಲಕ ಭಾವೈಕ್ಯ ಸಂದೇಶ ಸಾರಿದ್ದಾರೆ.
ಜಾರ್ಖಂಡ್ನ ದುಮ್ಕಾ ಜಿಲ್ಲೆಯ ನೌಷಾದ್ ಶೇಕ್ ಅವರು ಮಹೇಶ್ ಬಥಾನಿ ಗ್ರಾಮದಲ್ಲಿ ಸುಮಾರು 42 ಲಕ್ಷ ರೂ ವೆಚ್ಚದಲ್ಲಿ ಕೃಷ್ಣನ ದೇವಸ್ಥಾನ ನಿರ್ಮಿಸಿದ್ದಾರೆ.
ಧರ್ಮ ಧರ್ಮದ ಮಧ್ಯೆ ಪೈಪೋಟಿ ನಡೆಯುತ್ತಿರುವ ಈ ಹೊತ್ತಿನಲ್ಲಿ ಜಾರ್ಖಂಡ್ ನಲ್ಲಿ ಮುಸ್ಲಿಂ ಉದ್ಯಮಿಯೊಬ್ಬರು ಎಲ್ಲ ಧರ್ಮ ಒಂದೇ ಎಂಬ ಸಂದೇಶ ಸಾರಿದ್ದಾರೆ. ಸಹೋದರರ ಹಾಗೆ ಬಾಳಿ ಬದುಕಬೇಕಾದ ಬಗ್ಗೆ ಹಿತವಚನ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಮಾಯಾಪುರ್ಗೆ ಭೇಟಿ ನೀಡಿದ ನಂತರ ಕನಸಿನಲ್ಲಿ ಕೃಷ್ಣ ಕಾಣಿಸಿಕೊಂಡಿದ್ದರಿಂದ ದೇಗುಲ ನಿರ್ಮಿಸಿರುವುದಾಗಿ ಉದ್ಯಮಿ ಹೇಳಿಕೊಂಡಿದ್ದಾರೆ.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…