ಈಗ ಎಲ್ಲೆಡೆಯೂ ಧರ್ಮಗಳ ನಡುವೆ ಸಂಘರ್ಷ. ಈಗಂತೂ ಹಿಜಬ್ ವಿವಾದ. ಈ ನಡುವೆಯೂ ಸಾಮರಸ್ಯ ತಲೆ ಎತ್ತಿ ನಿಲ್ಲುತ್ತದೆ. ಈಚೆಗೆ ಉಪ್ಪಿನಂಗಡಿಯ ವಿಡಿಯೋ ವೈರಲ್ ಆಗಿರುವ ಬೆನ್ನಿಗೇ ಇದೊಂದು ಸಂಗತಿ ಗಮನ ಸೆಳೆದಿದೆ. ಮುಸ್ಲಿಂ ಉದ್ಯಮಿಯೊಬ್ಬರು ಕೃಷ್ಣನ ದೇಗುಲ ನಿರ್ಮಿಸುವ ಮೂಲಕ ಭಾವೈಕ್ಯ ಸಂದೇಶ ಸಾರಿದ್ದಾರೆ.
ಜಾರ್ಖಂಡ್ನ ದುಮ್ಕಾ ಜಿಲ್ಲೆಯ ನೌಷಾದ್ ಶೇಕ್ ಅವರು ಮಹೇಶ್ ಬಥಾನಿ ಗ್ರಾಮದಲ್ಲಿ ಸುಮಾರು 42 ಲಕ್ಷ ರೂ ವೆಚ್ಚದಲ್ಲಿ ಕೃಷ್ಣನ ದೇವಸ್ಥಾನ ನಿರ್ಮಿಸಿದ್ದಾರೆ.
ಧರ್ಮ ಧರ್ಮದ ಮಧ್ಯೆ ಪೈಪೋಟಿ ನಡೆಯುತ್ತಿರುವ ಈ ಹೊತ್ತಿನಲ್ಲಿ ಜಾರ್ಖಂಡ್ ನಲ್ಲಿ ಮುಸ್ಲಿಂ ಉದ್ಯಮಿಯೊಬ್ಬರು ಎಲ್ಲ ಧರ್ಮ ಒಂದೇ ಎಂಬ ಸಂದೇಶ ಸಾರಿದ್ದಾರೆ. ಸಹೋದರರ ಹಾಗೆ ಬಾಳಿ ಬದುಕಬೇಕಾದ ಬಗ್ಗೆ ಹಿತವಚನ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಮಾಯಾಪುರ್ಗೆ ಭೇಟಿ ನೀಡಿದ ನಂತರ ಕನಸಿನಲ್ಲಿ ಕೃಷ್ಣ ಕಾಣಿಸಿಕೊಂಡಿದ್ದರಿಂದ ದೇಗುಲ ನಿರ್ಮಿಸಿರುವುದಾಗಿ ಉದ್ಯಮಿ ಹೇಳಿಕೊಂಡಿದ್ದಾರೆ.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…