ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ನೂಕು ನುಗ್ಗಲಿನಲ್ಲಿ ಹಲವು ಭಕ್ತರು ಗಾಯಗೊಂಡಿದ್ದಾರೆ. ಸರ್ವದರ್ಶನ ಟಿಕೆಟ್ ಪಡೆದುಕೊಳ್ಳಲು ಭಕ್ತರು ಟಿಕೆಟ್ ಕೌಂಟರ್ ಬಳಿ ಒಮ್ಮೆಲೇ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು.ಈ ವೇಳೆ ಕಾಲ್ತುಳಿತ ಸಂಭವಿಸಿದೆ.
ಸರ್ವದರ್ಶನದಲ್ಲಿ ಎಲ್ಲರಿಗೂ ವೆಂಕಟೇಶ್ವರನ ದರ್ಶನ ಮಾಡಲು ಅವಕಾಶ ನೀಡಲಾಗುತ್ತದೆ. ಟಿಟಿಡಿ, ಭಕ್ತರಿಗೆ ಉಚಿತ ಟೋಕನ್ ಗಳನ್ನು ನೀಡುತ್ತದೆ. ಕಳೆದ ಎರಡು ದಿನಗಳಿಂದ ಸರ್ವದರ್ಶನ ಟಿಕೆಟ್ ವಿತರಣೆಯನ್ನು ಸ್ಥಗಿತ ಮಾಡಲಾಗಿತ್ತು.ಹಾಗಾಗಿ ಇಂದು ದೇವಸ್ಥಾನದಲ್ಲಿ ಭಕ್ತರ ಸಂಖ್ಯೆಯೂ ಹೆಚ್ಚಾಗಿತ್ತು. ದೇವಸ್ಥಾನದಲ್ಲಿರುವ ಕಬ್ಬಿಣದ ಬೇಲಿಯನ್ನು ಹಾರಿ ಒಳಕ್ಕೆ ನುಗ್ಗಲು ಭಕ್ತರು ಯತ್ನಿಸಿದ್ದಾರೆ. ಈ ವೇಳೆ ಗೊಂದಲದ ವಾತಾವರಣ ಸೃಷ್ಟಿಯಾಗಿದ್ದಲ್ಲದೆ, ನೂಕುನುಗ್ಗಲು ಉಂಟಾಗಿದೆ. ಆದರೆ ಯಾವುದೇ ತೊಂದರೆಯಾಗಿಲ್ಲ ಎಂದು ಟಿಟಿಡಿ ಸ್ಪಷ್ಟಪಡಿಸಿದೆ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…