ಕಳೆದ ತಿಂಗಳು ಭಾರಿ ಮಳೆಗೆ ತ್ತರಿಸಿದ್ದ ಉತ್ತರಭಾರತದಲ್ಲಿ ಆಮೇಲೆ ವರುಣ ಕೊಂಚ ಬಿಡುವು ನೀಡಿತ್ತು. ಆದರೆ ಇದೀಗ ಮತ್ತೆ ತನ್ನ ಪ್ರತಾಪವನ್ನು ತೋರುತ್ತಿದೆ. ಭಾರೀ ಮಳೆಗೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಶಿವ ದೇವಾಲಯವೊಂದು ಕುಸಿದು ಬಿದ್ದಿದ್ದುಅವಶೇಷಗಳಡಿ ಸಿಲುಕಿ ಹಲವರ ಸಾವಾಗಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಭಾರೀ ಮಳೆಯಿಂದಾಗಿ ದೇವಾಲಯ ಕುಸಿದಿದೆ. ಪ್ರಾರ್ಥನೆ ಸಲ್ಲಿಸಲು ಆಗಮಿಸಿದ್ದ ಭಕ್ತರ ಮೇಲೆ ದೇವಾಲಯ ಕುಸಿದಿದೆ. ದೇವಾಲಯದಡಿ ಸಿಲುಕಿರುವವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ತಿಳಿಸಿದ್ದಾರೆ. ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಅಧಿಕಾರಿಗಳು ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದುರ್ಘಟನೆಯ ಸಂದರ್ಭ ದೇವಾಲಯದ ಆವರಣದಲ್ಲಿ ಸುಮಾರು 50 ಜನರಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರೀ ಮಳೆಯ ಪರಿಣಾಮವಾಗಿ ಸಮ್ಮರ್ ಹಿಲ್ನಲ್ಲಿರುವ ಶಿವ ಮಂದಿರ ಕುಸಿದು ಬಿದ್ದಿದೆ. ಸದ್ಯಕ್ಕೆ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸ್ಥಳೀಯ ಆಡಳಿತವು ಅವಶೇಷವನ್ನು ತೆರವುಗೊಳಿಸಲು ಹಾಗೂ ಸಿಲುಕಿರುವವರನ್ನು ರಕ್ಷಿಸಲು ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಟ್ವೀಟ್ನಲ್ಲಿ ತಿಳಿಸಿದ್ದಾರೆ. ಈ ನಡುವೆ ಹಿಮಾಚಲ ಪ್ರದೇಶದ ಸೋಲನ್ನ ಹಳ್ಳಿಯೊಂದರಲ್ಲಿ ಮೇಘಸ್ಫೋಟವಾಗಿದ್ದು, 7 ಜನರು ಸಾವನ್ನಪ್ಪಿದ್ದಾರೆ. ಹಲವು ಮನೆಗಳು ಭಾರೀ ಮಳೆಗೆ ಕೊಚ್ಚಿಕೊಂಡು ಹೋಗಿವೆ. 6 ಜನರನ್ನು ರಕ್ಷಿಸಲಾಗಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ.
Source: PTI
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…