Advertisement
ಪ್ರಮುಖ

#HeavyRain | ಉತ್ತರದಲ್ಲಿ ಮೇಘ ಸ್ಫೋಟ | ಭಾರೀ ಮಳೆಗೆ ಶಿಮ್ಲಾದಲ್ಲಿ ದೇವಾಲಯ ಕುಸಿತ | 9 ಮಂದಿ ಬಲಿ | ಹಲವರು ಸಿಲುಕಿರುವ ಶಂಕೆ

Share

ಕಳೆದ ತಿಂಗಳು ಭಾರಿ ಮಳೆಗೆ ತ್ತರಿಸಿದ್ದ ಉತ್ತರಭಾರತದಲ್ಲಿ ಆಮೇಲೆ ವರುಣ ಕೊಂಚ ಬಿಡುವು ನೀಡಿತ್ತು. ಆದರೆ ಇದೀಗ ಮತ್ತೆ ತನ್ನ ಪ್ರತಾಪವನ್ನು ತೋರುತ್ತಿದೆ. ಭಾರೀ ಮಳೆಗೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಶಿವ ದೇವಾಲಯವೊಂದು ಕುಸಿದು ಬಿದ್ದಿದ್ದುಅವಶೇಷಗಳಡಿ ಸಿಲುಕಿ ಹಲವರ ಸಾವಾಗಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಭಾರೀ ಮಳೆಯಿಂದಾಗಿ ದೇವಾಲಯ ಕುಸಿದಿದೆ. ಪ್ರಾರ್ಥನೆ ಸಲ್ಲಿಸಲು ಆಗಮಿಸಿದ್ದ ಭಕ್ತರ ಮೇಲೆ ದೇವಾಲಯ ಕುಸಿದಿದೆ. ದೇವಾಲಯದಡಿ ಸಿಲುಕಿರುವವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ತಿಳಿಸಿದ್ದಾರೆ. ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಅಧಿಕಾರಿಗಳು ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದುರ್ಘಟನೆಯ ಸಂದರ್ಭ ದೇವಾಲಯದ ಆವರಣದಲ್ಲಿ ಸುಮಾರು 50 ಜನರಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರೀ ಮಳೆಯ ಪರಿಣಾಮವಾಗಿ ಸಮ್ಮರ್ ಹಿಲ್‌ನಲ್ಲಿರುವ ಶಿವ ಮಂದಿರ ಕುಸಿದು ಬಿದ್ದಿದೆ. ಸದ್ಯಕ್ಕೆ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸ್ಥಳೀಯ ಆಡಳಿತವು ಅವಶೇಷವನ್ನು ತೆರವುಗೊಳಿಸಲು ಹಾಗೂ ಸಿಲುಕಿರುವವರನ್ನು ರಕ್ಷಿಸಲು ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಈ ನಡುವೆ ಹಿಮಾಚಲ ಪ್ರದೇಶದ ಸೋಲನ್‌ನ ಹಳ್ಳಿಯೊಂದರಲ್ಲಿ ಮೇಘಸ್ಫೋಟವಾಗಿದ್ದು, 7 ಜನರು ಸಾವನ್ನಪ್ಪಿದ್ದಾರೆ. ಹಲವು ಮನೆಗಳು ಭಾರೀ ಮಳೆಗೆ ಕೊಚ್ಚಿಕೊಂಡು ಹೋಗಿವೆ. 6 ಜನರನ್ನು ರಕ್ಷಿಸಲಾಗಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ.

Source: PTI

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

15 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

24 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago