ಕಳೆದ ತಿಂಗಳು ಭಾರಿ ಮಳೆಗೆ ತ್ತರಿಸಿದ್ದ ಉತ್ತರಭಾರತದಲ್ಲಿ ಆಮೇಲೆ ವರುಣ ಕೊಂಚ ಬಿಡುವು ನೀಡಿತ್ತು. ಆದರೆ ಇದೀಗ ಮತ್ತೆ ತನ್ನ ಪ್ರತಾಪವನ್ನು ತೋರುತ್ತಿದೆ. ಭಾರೀ ಮಳೆಗೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಶಿವ ದೇವಾಲಯವೊಂದು ಕುಸಿದು ಬಿದ್ದಿದ್ದುಅವಶೇಷಗಳಡಿ ಸಿಲುಕಿ ಹಲವರ ಸಾವಾಗಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಭಾರೀ ಮಳೆಯಿಂದಾಗಿ ದೇವಾಲಯ ಕುಸಿದಿದೆ. ಪ್ರಾರ್ಥನೆ ಸಲ್ಲಿಸಲು ಆಗಮಿಸಿದ್ದ ಭಕ್ತರ ಮೇಲೆ ದೇವಾಲಯ ಕುಸಿದಿದೆ. ದೇವಾಲಯದಡಿ ಸಿಲುಕಿರುವವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ತಿಳಿಸಿದ್ದಾರೆ. ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಅಧಿಕಾರಿಗಳು ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದುರ್ಘಟನೆಯ ಸಂದರ್ಭ ದೇವಾಲಯದ ಆವರಣದಲ್ಲಿ ಸುಮಾರು 50 ಜನರಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರೀ ಮಳೆಯ ಪರಿಣಾಮವಾಗಿ ಸಮ್ಮರ್ ಹಿಲ್ನಲ್ಲಿರುವ ಶಿವ ಮಂದಿರ ಕುಸಿದು ಬಿದ್ದಿದೆ. ಸದ್ಯಕ್ಕೆ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸ್ಥಳೀಯ ಆಡಳಿತವು ಅವಶೇಷವನ್ನು ತೆರವುಗೊಳಿಸಲು ಹಾಗೂ ಸಿಲುಕಿರುವವರನ್ನು ರಕ್ಷಿಸಲು ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಟ್ವೀಟ್ನಲ್ಲಿ ತಿಳಿಸಿದ್ದಾರೆ. ಈ ನಡುವೆ ಹಿಮಾಚಲ ಪ್ರದೇಶದ ಸೋಲನ್ನ ಹಳ್ಳಿಯೊಂದರಲ್ಲಿ ಮೇಘಸ್ಫೋಟವಾಗಿದ್ದು, 7 ಜನರು ಸಾವನ್ನಪ್ಪಿದ್ದಾರೆ. ಹಲವು ಮನೆಗಳು ಭಾರೀ ಮಳೆಗೆ ಕೊಚ್ಚಿಕೊಂಡು ಹೋಗಿವೆ. 6 ಜನರನ್ನು ರಕ್ಷಿಸಲಾಗಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ.
Source: PTI
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…