ದಕ್ಷಿಣ ಕನ್ನಡ ಜಿಲ್ಲೆಯ ಮೂರು ದೇವಸ್ಥಾನಗಳಿಗೆ ಆಯ್ಕೆಯಾಗಿದ್ದ ವ್ಯವಸ್ಥಾಪನಾ ಸಮಿತಿಯ ಆಯ್ಕೆಯ ಆದೇಶಕ್ಕೆ ತಾತ್ಕಾಲಿಕವಾದ ತಡೆಯನ್ನು ನೀಡಲಾಗಿದೆ ಎಂದು ಧಾರ್ಮಿಕ ದತ್ತಿ ಆಯುಕ್ತರು ಆದೇಶವನ್ನು ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಹಾಗೂ ಮಂಗಳೂರಿನ ನಂದನೇಶ್ವರ ದೇವಸ್ಥಾನ ಮತ್ತು ಕೊಕ್ಕಡ ವೈದ್ಯನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಆಯ್ಕೆಗೆ ತಾತ್ಕಾಲಿಕ ತಡೆಯಾಗಿದೆ. ಕಾರಣವನ್ನು ನೀಡಲಾಗಿಲ್ಲ, ಮುಂದಿನ ಆದೇಶದವರೆಗೆ ಈ ತಡೆಯನ್ನು ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಧಾರ್ಮಿಕ ದತ್ತಿ ಇಲಾಖಾ ಸಚಿವರ ಟಿಪ್ಪಣಿ ಮೇಲೆ ಈ ಆದೇಶವನ್ನು ಮಾಡಲಾಗಿದೆ. ದ ಕ ಜಿಲ್ಲೆಯ ಈ ಮೂರು ದೇವಸ್ಥಾನಗಳಿಗೂ ಆಯ್ಕೆ ನಡೆದು ಅಧಿಕಾರ ಹಸ್ತಾಂತರ ಪ್ರಕ್ರಿಯೆಯೂ ನಡೆದಿತ್ತು. ಇದೀಗ ಮತ್ತೆ ಆಡಳಿತಾಧಿಕಾರಿಗೆ ಅಧಿಕಾರ ಹಸ್ತಾಂತರಿಸಬೇಕಾಗಿದೆ. ಪಂಜ ದೇವಸ್ಥಾನಕ್ಕೆ ಡಾ.ದೇವಿಪ್ರಸಾದ್ ಕಾನತ್ತೂರು ನೇತೃತ್ವದ ತಂಡ ಆಯ್ಕೆಯಾಗಿ ಅಧಿಕಾರ ವಹಿಸಿಕೊಂಡಿತ್ತು. ಅದೇ ದಿನ ತಾತ್ಕಾಲಿಕ ತಡೆಯೂ ಬಂದಿತ್ತು.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…