ದಕ್ಷಿಣ ಕನ್ನಡ ಜಿಲ್ಲೆಯ ಮೂರು ದೇವಸ್ಥಾನಗಳಿಗೆ ಆಯ್ಕೆಯಾಗಿದ್ದ ವ್ಯವಸ್ಥಾಪನಾ ಸಮಿತಿಯ ಆಯ್ಕೆಯ ಆದೇಶಕ್ಕೆ ತಾತ್ಕಾಲಿಕವಾದ ತಡೆಯನ್ನು ನೀಡಲಾಗಿದೆ ಎಂದು ಧಾರ್ಮಿಕ ದತ್ತಿ ಆಯುಕ್ತರು ಆದೇಶವನ್ನು ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಹಾಗೂ ಮಂಗಳೂರಿನ ನಂದನೇಶ್ವರ ದೇವಸ್ಥಾನ ಮತ್ತು ಕೊಕ್ಕಡ ವೈದ್ಯನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಆಯ್ಕೆಗೆ ತಾತ್ಕಾಲಿಕ ತಡೆಯಾಗಿದೆ. ಕಾರಣವನ್ನು ನೀಡಲಾಗಿಲ್ಲ, ಮುಂದಿನ ಆದೇಶದವರೆಗೆ ಈ ತಡೆಯನ್ನು ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಧಾರ್ಮಿಕ ದತ್ತಿ ಇಲಾಖಾ ಸಚಿವರ ಟಿಪ್ಪಣಿ ಮೇಲೆ ಈ ಆದೇಶವನ್ನು ಮಾಡಲಾಗಿದೆ. ದ ಕ ಜಿಲ್ಲೆಯ ಈ ಮೂರು ದೇವಸ್ಥಾನಗಳಿಗೂ ಆಯ್ಕೆ ನಡೆದು ಅಧಿಕಾರ ಹಸ್ತಾಂತರ ಪ್ರಕ್ರಿಯೆಯೂ ನಡೆದಿತ್ತು. ಇದೀಗ ಮತ್ತೆ ಆಡಳಿತಾಧಿಕಾರಿಗೆ ಅಧಿಕಾರ ಹಸ್ತಾಂತರಿಸಬೇಕಾಗಿದೆ. ಪಂಜ ದೇವಸ್ಥಾನಕ್ಕೆ ಡಾ.ದೇವಿಪ್ರಸಾದ್ ಕಾನತ್ತೂರು ನೇತೃತ್ವದ ತಂಡ ಆಯ್ಕೆಯಾಗಿ ಅಧಿಕಾರ ವಹಿಸಿಕೊಂಡಿತ್ತು. ಅದೇ ದಿನ ತಾತ್ಕಾಲಿಕ ತಡೆಯೂ ಬಂದಿತ್ತು.
ರಾಜ್ಯದಲ್ಲಿ ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ…
ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮಕ್ಕಾಗಿ 42,289 ಮಂದಿ ಅರ್ಜಿ ಸಲ್ಲಿಸಿದ್ದಾರೆ…
ಕನ್ನಡವನ್ನು ಕಲುಷಿತ ಮಾಡಿರುವ ಪರಕೀಯ ಶಬ್ದಗಳನ್ನು ಅವರಿಗೇ ಬಿಟ್ಟುಬಿಡೋಣ. ಶುದ್ಧ ಕನ್ನಡದ ಸುಂದರ…
ಜಮ್ಮು ಕಾಶ್ಮೀರದ ಕಥುವಾದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಏಳು ಜನ…
ದೇಶದ ಜಿಡಿಪಿಯಲ್ಲಿ ಗಮನಾರ್ಹ ರೀತಿಯ ಬೆಳವಣಿಗೆಯಾಗುತ್ತಿದ್ದು, ಬೇರೆ ದೇಶದವರು ಭಾರತದಲ್ಲಿ ಹೂಡಿಕೆ ಮಾಡಲು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಗಸ್ಟ್ 20, 21ರಂದು ಮಹಾರಾಷ್ಟ್ರ ಮೂಲಕ ಸಾಗಿ ಗುಜರಾತ್…