Advertisement
Categories: Uncategorized

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಆಯ್ಕೆ ಗೊಂದಲ | ಪಂಜ ಸೇರಿದಂತೆ ದಕ ಜಿಲ್ಲೆಯ ಮೂರು ದೇವಸ್ಥಾನಗಳ ಆಯ್ಕೆಗೆ ತಾತ್ಕಾಲಿಕ ತಡೆ |

Share

ದಕ್ಷಿಣ ಕನ್ನಡ ಜಿಲ್ಲೆಯ ಮೂರು ದೇವಸ್ಥಾನಗಳಿಗೆ ಆಯ್ಕೆಯಾಗಿದ್ದ ವ್ಯವಸ್ಥಾಪನಾ ಸಮಿತಿಯ ಆಯ್ಕೆಯ ಆದೇಶಕ್ಕೆ ತಾತ್ಕಾಲಿಕವಾದ ತಡೆಯನ್ನು ನೀಡಲಾಗಿದೆ ಎಂದು ಧಾರ್ಮಿಕ ದತ್ತಿ  ಆಯುಕ್ತರು ಆದೇಶವನ್ನು ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಹಾಗೂ ಮಂಗಳೂರಿನ ನಂದನೇಶ್ವರ ದೇವಸ್ಥಾನ ಮತ್ತು ಕೊಕ್ಕಡ ವೈದ್ಯನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಆಯ್ಕೆಗೆ ತಾತ್ಕಾಲಿಕ ತಡೆಯಾಗಿದೆ. ಕಾರಣವನ್ನು ನೀಡಲಾಗಿಲ್ಲ, ಮುಂದಿನ ಆದೇಶದವರೆಗೆ ಈ ತಡೆಯನ್ನು ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಧಾರ್ಮಿಕ ದತ್ತಿ ಇಲಾಖಾ ಸಚಿವರ ಟಿಪ್ಪಣಿ ಮೇಲೆ ಈ ಆದೇಶವನ್ನು ಮಾಡಲಾಗಿದೆ. ದ ಕ ಜಿಲ್ಲೆಯ ಈ ಮೂರು ದೇವಸ್ಥಾನಗಳಿಗೂ ಆಯ್ಕೆ ನಡೆದು ಅಧಿಕಾರ ಹಸ್ತಾಂತರ ಪ್ರಕ್ರಿಯೆಯೂ ನಡೆದಿತ್ತು. ಇದೀಗ ಮತ್ತೆ ಆಡಳಿತಾಧಿಕಾರಿಗೆ ಅಧಿಕಾರ ಹಸ್ತಾಂತರಿಸಬೇಕಾಗಿದೆ. ಪಂಜ ದೇವಸ್ಥಾನಕ್ಕೆ ಡಾ.ದೇವಿಪ್ರಸಾದ್‌ ಕಾನತ್ತೂರು ನೇತೃತ್ವದ ತಂಡ ಆಯ್ಕೆಯಾಗಿ ಅಧಿಕಾರ ವಹಿಸಿಕೊಂಡಿತ್ತು. ಅದೇ ದಿನ ತಾತ್ಕಾಲಿಕ ತಡೆಯೂ ಬಂದಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

6 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

22 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago