ದಕ್ಷಿಣ ಕನ್ನಡ ಜಿಲ್ಲೆಯ ಮೂರು ದೇವಸ್ಥಾನಗಳಿಗೆ ಆಯ್ಕೆಯಾಗಿದ್ದ ವ್ಯವಸ್ಥಾಪನಾ ಸಮಿತಿಯ ಆಯ್ಕೆಯ ಆದೇಶಕ್ಕೆ ತಾತ್ಕಾಲಿಕವಾದ ತಡೆಯನ್ನು ನೀಡಲಾಗಿದೆ ಎಂದು ಧಾರ್ಮಿಕ ದತ್ತಿ ಆಯುಕ್ತರು ಆದೇಶವನ್ನು ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಹಾಗೂ ಮಂಗಳೂರಿನ ನಂದನೇಶ್ವರ ದೇವಸ್ಥಾನ ಮತ್ತು ಕೊಕ್ಕಡ ವೈದ್ಯನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಆಯ್ಕೆಗೆ ತಾತ್ಕಾಲಿಕ ತಡೆಯಾಗಿದೆ. ಕಾರಣವನ್ನು ನೀಡಲಾಗಿಲ್ಲ, ಮುಂದಿನ ಆದೇಶದವರೆಗೆ ಈ ತಡೆಯನ್ನು ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಧಾರ್ಮಿಕ ದತ್ತಿ ಇಲಾಖಾ ಸಚಿವರ ಟಿಪ್ಪಣಿ ಮೇಲೆ ಈ ಆದೇಶವನ್ನು ಮಾಡಲಾಗಿದೆ. ದ ಕ ಜಿಲ್ಲೆಯ ಈ ಮೂರು ದೇವಸ್ಥಾನಗಳಿಗೂ ಆಯ್ಕೆ ನಡೆದು ಅಧಿಕಾರ ಹಸ್ತಾಂತರ ಪ್ರಕ್ರಿಯೆಯೂ ನಡೆದಿತ್ತು. ಇದೀಗ ಮತ್ತೆ ಆಡಳಿತಾಧಿಕಾರಿಗೆ ಅಧಿಕಾರ ಹಸ್ತಾಂತರಿಸಬೇಕಾಗಿದೆ. ಪಂಜ ದೇವಸ್ಥಾನಕ್ಕೆ ಡಾ.ದೇವಿಪ್ರಸಾದ್ ಕಾನತ್ತೂರು ನೇತೃತ್ವದ ತಂಡ ಆಯ್ಕೆಯಾಗಿ ಅಧಿಕಾರ ವಹಿಸಿಕೊಂಡಿತ್ತು. ಅದೇ ದಿನ ತಾತ್ಕಾಲಿಕ ತಡೆಯೂ ಬಂದಿತ್ತು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…