ದಕ್ಷಿಣ ಕನ್ನಡ ಜಿಲ್ಲೆಯ ಮೂರು ದೇವಸ್ಥಾನಗಳಿಗೆ ಆಯ್ಕೆಯಾಗಿದ್ದ ವ್ಯವಸ್ಥಾಪನಾ ಸಮಿತಿಯ ಆಯ್ಕೆಯ ಆದೇಶಕ್ಕೆ ತಾತ್ಕಾಲಿಕವಾದ ತಡೆಯನ್ನು ನೀಡಲಾಗಿದೆ ಎಂದು ಧಾರ್ಮಿಕ ದತ್ತಿ ಆಯುಕ್ತರು ಆದೇಶವನ್ನು ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಹಾಗೂ ಮಂಗಳೂರಿನ ನಂದನೇಶ್ವರ ದೇವಸ್ಥಾನ ಮತ್ತು ಕೊಕ್ಕಡ ವೈದ್ಯನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಆಯ್ಕೆಗೆ ತಾತ್ಕಾಲಿಕ ತಡೆಯಾಗಿದೆ. ಕಾರಣವನ್ನು ನೀಡಲಾಗಿಲ್ಲ, ಮುಂದಿನ ಆದೇಶದವರೆಗೆ ಈ ತಡೆಯನ್ನು ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಧಾರ್ಮಿಕ ದತ್ತಿ ಇಲಾಖಾ ಸಚಿವರ ಟಿಪ್ಪಣಿ ಮೇಲೆ ಈ ಆದೇಶವನ್ನು ಮಾಡಲಾಗಿದೆ. ದ ಕ ಜಿಲ್ಲೆಯ ಈ ಮೂರು ದೇವಸ್ಥಾನಗಳಿಗೂ ಆಯ್ಕೆ ನಡೆದು ಅಧಿಕಾರ ಹಸ್ತಾಂತರ ಪ್ರಕ್ರಿಯೆಯೂ ನಡೆದಿತ್ತು. ಇದೀಗ ಮತ್ತೆ ಆಡಳಿತಾಧಿಕಾರಿಗೆ ಅಧಿಕಾರ ಹಸ್ತಾಂತರಿಸಬೇಕಾಗಿದೆ. ಪಂಜ ದೇವಸ್ಥಾನಕ್ಕೆ ಡಾ.ದೇವಿಪ್ರಸಾದ್ ಕಾನತ್ತೂರು ನೇತೃತ್ವದ ತಂಡ ಆಯ್ಕೆಯಾಗಿ ಅಧಿಕಾರ ವಹಿಸಿಕೊಂಡಿತ್ತು. ಅದೇ ದಿನ ತಾತ್ಕಾಲಿಕ ತಡೆಯೂ ಬಂದಿತ್ತು.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…