ದಕ್ಷಿಣ ಕನ್ನಡ ಜಿಲ್ಲೆಯ ಮೂರು ದೇವಸ್ಥಾನಗಳಿಗೆ ಆಯ್ಕೆಯಾಗಿದ್ದ ವ್ಯವಸ್ಥಾಪನಾ ಸಮಿತಿಯ ಆಯ್ಕೆಯ ಆದೇಶಕ್ಕೆ ತಾತ್ಕಾಲಿಕವಾದ ತಡೆಯನ್ನು ನೀಡಲಾಗಿದೆ ಎಂದು ಧಾರ್ಮಿಕ ದತ್ತಿ ಆಯುಕ್ತರು ಆದೇಶವನ್ನು ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಹಾಗೂ ಮಂಗಳೂರಿನ ನಂದನೇಶ್ವರ ದೇವಸ್ಥಾನ ಮತ್ತು ಕೊಕ್ಕಡ ವೈದ್ಯನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಆಯ್ಕೆಗೆ ತಾತ್ಕಾಲಿಕ ತಡೆಯಾಗಿದೆ. ಕಾರಣವನ್ನು ನೀಡಲಾಗಿಲ್ಲ, ಮುಂದಿನ ಆದೇಶದವರೆಗೆ ಈ ತಡೆಯನ್ನು ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಧಾರ್ಮಿಕ ದತ್ತಿ ಇಲಾಖಾ ಸಚಿವರ ಟಿಪ್ಪಣಿ ಮೇಲೆ ಈ ಆದೇಶವನ್ನು ಮಾಡಲಾಗಿದೆ. ದ ಕ ಜಿಲ್ಲೆಯ ಈ ಮೂರು ದೇವಸ್ಥಾನಗಳಿಗೂ ಆಯ್ಕೆ ನಡೆದು ಅಧಿಕಾರ ಹಸ್ತಾಂತರ ಪ್ರಕ್ರಿಯೆಯೂ ನಡೆದಿತ್ತು. ಇದೀಗ ಮತ್ತೆ ಆಡಳಿತಾಧಿಕಾರಿಗೆ ಅಧಿಕಾರ ಹಸ್ತಾಂತರಿಸಬೇಕಾಗಿದೆ. ಪಂಜ ದೇವಸ್ಥಾನಕ್ಕೆ ಡಾ.ದೇವಿಪ್ರಸಾದ್ ಕಾನತ್ತೂರು ನೇತೃತ್ವದ ತಂಡ ಆಯ್ಕೆಯಾಗಿ ಅಧಿಕಾರ ವಹಿಸಿಕೊಂಡಿತ್ತು. ಅದೇ ದಿನ ತಾತ್ಕಾಲಿಕ ತಡೆಯೂ ಬಂದಿತ್ತು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…