Advertisement
ಸುದ್ದಿಗಳು

ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಲೈಸೆನ್ಸ್ – ಅರ್ಜಿ ಆಹ್ವಾನ

Share

2025 ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ/ ತೆರೆದ ಪ್ರದೇಶದಲ್ಲಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆಯನ್ನು ಕೋರಿ (ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿಯನ್ನು ಜಿಲ್ಲಾಧಿಕಾರಿಯವರ ಕಚೇರಿಗೆ ಅಕ್ಟೋಬರ್ 10 ರೊಳಗಾಗಿ ಸಲ್ಲಿಸಬಹುದು.

Advertisement
Advertisement

ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕಾಗಿದ್ದು, ಅರ್ಜಿಯೊಂದಿಗೆ ತಾತ್ಕಾಲಿಕ ಅಂಗಡಿ ತೆರೆಯಲು ಉದ್ದೇಶಿಸಿರುವ ಸ್ಥಳದ (ರಸ್ತೆ, ಕಟ್ಟಡ ಇತ್ಯಾದಿ ವಿವರ) ನೀಲಿ ನಕ್ಷೆ , ಅರ್ಜಿದಾರರ ಭಾವಚಿತ್ರ,  ಪ್ರಸ್ತಾವಿತ ಜಮೀನಿನ ಪಹಣಿ, ಖಾಸಗಿ ಜಮೀನಾಗಿದ್ದಲ್ಲಿ ಜಮೀನಿನ ಮಾಲಕರ ಒಪ್ಪಿಗೆ ಪತ್ರ (100 ರೂ ಸ್ಟಾಂಪ್ ಪೇಪರ್ ), ಸರಕಾರಿ ಜಾಗವಾಗಿದ್ದಲ್ಲಿ ಜಮೀನು ಯಾವ ಇಲಾಖೆಯ ಸುಪರ್ದಿಯಲ್ಲಿದೆಯೋ ಆ ಇಲಾಖೆಯ ನಿರಾಕ್ಷೇಪಣಾ ಪತ್ರದೊಂದಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ರೂ.200 ಪರಿಶೀಲನಾ ಶುಲ್ಕವನ್ನು ಹಾಗೂ ಪರವಾನಿಗೆ ಮಂಜೂರುಮಾಡುವ ಸಂದರ್ಭದಲ್ಲಿ ರೂ 500  ಲೈಸೆನ್ಸ್ ಶುಲ್ಕವನ್ನು ಪಾವತಿಸಬೇಕು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

ಅರ್ಜಿದಾರರು ಈ ಕಚೇರಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಅಗ್ನಿಶಾಮಕ ಇಲಾಖೆ ನಿರಾಕ್ಷೇಪಣಾ ಪತ್ರ, ಪೊಲೀಸ್ ಅಧೀಕ್ಷಕರ ನಿರಾಕ್ಷೇಪಣಾ ಪತ್ರ, ಸಂಬಂಧಪಟ್ಟ ತಹಶೀಲ್ದಾರರ ನಿರಾಕ್ಷೇಪಣಾ ಪತ್ರ, ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ನಿರಾಕ್ಷೇಪಣಾ ಪತ್ರ ಪಡೆದು ಸಲ್ಲಿಸಬೇಕು. ಕಡ್ಡಾಯವಾಗಿ ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶವಿರುತ್ತದೆ. ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರ ಬಂದಲ್ಲಿ ಸ್ಫೋಟಕ ಕಾಯಿದೆ/ನಿಯಮಾವಳಿಗಳಿಗೆ ಒಳಪಟ್ಟು ಪರವಾನಿಗೆ ಮಂಜೂರು ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ನಿಷೇಧ ಇಲ್ಲ – ಈಗ ಅಡಿಕೆ ಬಳಕೆಯ ನಿಯಂತ್ರಣದತ್ತ ಫೋಕಸ್

ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…

3 hours ago

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

7 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

8 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

17 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

17 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

18 hours ago