ಶಾಲೆಯ ತಾತ್ಕಾಲಿಕ ಪೆಂಡಾಲ್ ಕುಸಿದು 40ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ…!

October 21, 2022
8:17 PM

ಶಾಲಾ ವಿಜ್ಞಾನ ಮೇಳ ಕಾರ್ಯಕ್ರಮ ನಡೆಯುತ್ತಿದ್ದಾಗ ಪೆಂಡಾಲ್ ಕುಸಿದು ಬಿದ್ದ ಪರಿಣಾಮ 40ಕ್ಕೂ ಅಧಿಕ ವಿದ್ಯಾರ್ಥಿಗಳು  ಗಾಯಗೊಂಡ ಘಟನೆ ಕಾಸರಗೋಡು ಜಿಲ್ಲೆ ಉಪ್ಪಳ ಸಮೀಪದ ಬೇಕೂರು ಸರ್ಕಾರಿ ಹೈಯರ್‌ ಸೆಕೆಂಡರಿ ಶಾಲೆಯ ಆವರಣದಲ್ಲಿ ನಡೆದಿದೆ.

ಮಂಜೇಶ್ವರ ಉಪ ಜಿಲ್ಲಾ ಮಟ್ಟದ ಶಾಲಾ ವಿಜ್ಞಾನ ಮೇಳ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮೂರು ದಿನಗಳ ಕಾಲ ಬೇಕೂರು ಸರಕಾರಿ ಹಯಾರ್ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ಮೇಳ ಆಯೋಜಿಸಲಾಗಿದ್ದು, ಎರಡನೇ ದಿನವಾದ ಇಂದು ಈ ಅವಘಡ ನಡೆದಿದೆ.

ಈ ಕಾರ್ಯಕ್ರಮಕ್ಕಾಗಿ ತಾತ್ಕಾಲಿಕವಾಗಿ ಶೀಟ್‌ ಹೊದಿಸಿ ಹಾಕಿದ್ದ ಪೆಂಡಾಲ್‌ ಮಧ್ಯಾಹ್ನ ಸಂಪೂರ್ಣವಾಗಿ ಕುಸಿದು ಬಿದ್ದು ಈ ಅನಾಹುತ ಸಂಭವಿಸಿದೆ.

ಈ ಸಂದರ್ಭದಲ್ಲಿ 200 ಕ್ಕೂ ಅಧಿಕ ವಿದ್ಯಾರ್ಥಿಗಳು ಚಪ್ಪರದಡಿಯಲ್ಲಿದ್ದರು. ಸಂಘಟಕರು ಕೂಡಲೇ ತುರ್ತು ರಕ್ಷಣಾ ಕಾರ್ಯ ಮತ್ತು ಪರಿಹಾರ ಕಾರ್ಯಾಚರಣೆಗೆ ತೊಡಗಿದ್ದರಲ್ಲದೆ, ಸ್ಥಳೀಯಾಡಳಿತದ ನೆರವನ್ನೂ ಪಡೆದಿದ್ದರು. ಅಲ್ಲಿದ್ದವರೇ ಶೀಟ್‌ಗಳನ್ನು ಸರಿಸಿ, ಅಡಿಯಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ.

ಈ ಘಟನೆಯಲ್ಲಿ 43 ಮಕ್ಕಳು ಹಾಗೂ ನಾಲ್ವರು ಶಿಕ್ಷಕರು ಗಾಯಗೊಂಡಿದ್ದಾರೆ. ಅವರನ್ನು ಕಾಸರಗೋಡು ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ
April 17, 2026
1:55 PM
by: ಸಾಯಿಶೇಖರ್ ಕರಿಕಳ
ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror