ಶಾಲಾ ವಿಜ್ಞಾನ ಮೇಳ ಕಾರ್ಯಕ್ರಮ ನಡೆಯುತ್ತಿದ್ದಾಗ ಪೆಂಡಾಲ್ ಕುಸಿದು ಬಿದ್ದ ಪರಿಣಾಮ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಕಾಸರಗೋಡು ಜಿಲ್ಲೆ ಉಪ್ಪಳ ಸಮೀಪದ ಬೇಕೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಆವರಣದಲ್ಲಿ ನಡೆದಿದೆ.
ಮಂಜೇಶ್ವರ ಉಪ ಜಿಲ್ಲಾ ಮಟ್ಟದ ಶಾಲಾ ವಿಜ್ಞಾನ ಮೇಳ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮೂರು ದಿನಗಳ ಕಾಲ ಬೇಕೂರು ಸರಕಾರಿ ಹಯಾರ್ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ಮೇಳ ಆಯೋಜಿಸಲಾಗಿದ್ದು, ಎರಡನೇ ದಿನವಾದ ಇಂದು ಈ ಅವಘಡ ನಡೆದಿದೆ.
ಈ ಕಾರ್ಯಕ್ರಮಕ್ಕಾಗಿ ತಾತ್ಕಾಲಿಕವಾಗಿ ಶೀಟ್ ಹೊದಿಸಿ ಹಾಕಿದ್ದ ಪೆಂಡಾಲ್ ಮಧ್ಯಾಹ್ನ ಸಂಪೂರ್ಣವಾಗಿ ಕುಸಿದು ಬಿದ್ದು ಈ ಅನಾಹುತ ಸಂಭವಿಸಿದೆ.
ಈ ಘಟನೆಯಲ್ಲಿ 43 ಮಕ್ಕಳು ಹಾಗೂ ನಾಲ್ವರು ಶಿಕ್ಷಕರು ಗಾಯಗೊಂಡಿದ್ದಾರೆ. ಅವರನ್ನು ಕಾಸರಗೋಡು ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…