ಶಾಲಾ ವಿಜ್ಞಾನ ಮೇಳ ಕಾರ್ಯಕ್ರಮ ನಡೆಯುತ್ತಿದ್ದಾಗ ಪೆಂಡಾಲ್ ಕುಸಿದು ಬಿದ್ದ ಪರಿಣಾಮ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಕಾಸರಗೋಡು ಜಿಲ್ಲೆ ಉಪ್ಪಳ ಸಮೀಪದ ಬೇಕೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಆವರಣದಲ್ಲಿ ನಡೆದಿದೆ.
ಮಂಜೇಶ್ವರ ಉಪ ಜಿಲ್ಲಾ ಮಟ್ಟದ ಶಾಲಾ ವಿಜ್ಞಾನ ಮೇಳ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮೂರು ದಿನಗಳ ಕಾಲ ಬೇಕೂರು ಸರಕಾರಿ ಹಯಾರ್ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ಮೇಳ ಆಯೋಜಿಸಲಾಗಿದ್ದು, ಎರಡನೇ ದಿನವಾದ ಇಂದು ಈ ಅವಘಡ ನಡೆದಿದೆ.
ಈ ಕಾರ್ಯಕ್ರಮಕ್ಕಾಗಿ ತಾತ್ಕಾಲಿಕವಾಗಿ ಶೀಟ್ ಹೊದಿಸಿ ಹಾಕಿದ್ದ ಪೆಂಡಾಲ್ ಮಧ್ಯಾಹ್ನ ಸಂಪೂರ್ಣವಾಗಿ ಕುಸಿದು ಬಿದ್ದು ಈ ಅನಾಹುತ ಸಂಭವಿಸಿದೆ.
ಈ ಘಟನೆಯಲ್ಲಿ 43 ಮಕ್ಕಳು ಹಾಗೂ ನಾಲ್ವರು ಶಿಕ್ಷಕರು ಗಾಯಗೊಂಡಿದ್ದಾರೆ. ಅವರನ್ನು ಕಾಸರಗೋಡು ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…