ಎಳನೀರು ಸಂಕಷ್ಟ | ಉತ್ಪಾದನೆ ಕುಸಿತದಿಂದ ಸರಬರಾಜಿಗೆ ಹೊಡೆತ..!

February 16, 2026
7:11 AM
ಭಾರತದ ತೆಂಗಿನ ನಗರಿ ಎಂದು ಕರೆಯುವ ಪೊಳ್ಳಾಚಿ-ಅಣ್ಣಾಮಲೈ ಭಾಗದಲ್ಲಿ ಎಳನೀರು ಉತ್ಪಾದನೆ 40% ಕುಸಿತವಾಗಿದೆ. ಇದರಿಂದ ಪೂರೈಕೆ ಪ್ರಮಾಣ 50% ಇಳಿಕೆಯಾಗಿದ್ದು, ಹವಾಮಾನ ಬದಲಾವಣೆ ಪ್ರಮುಖ ಕಾರಣವೆಂದು ರೈತರು ತಿಳಿಸಿದ್ದಾರೆ.

ದೇಶದ ಪ್ರಮುಖ ತೆಂಗಿನ ನೀರು ಉತ್ಪಾದನಾ ಪ್ರದೇಶವಾದ “ಭಾರತದ ತೆಂಗಿನ ನಗರಿ” ಎಂದು ಕರೆಯಲ್ಪಡುವ ಪೊಳ್ಳಾಚಿ-ಅಣ್ಣಾಮಲೈ ಭಾಗದಲ್ಲಿ ಕಳೆದ ಕೆಲವು ತಿಂಗಳ ಅವಧಿಯಲ್ಲಿ ಎಳನೀರು  ಉತ್ಪಾದನೆ ಸುಮಾರು 40% ಕುಸಿದಿದೆ. ಇದರ ಪರಿಣಾಮವಾಗಿ ಪೂರೈಕೆ ಪ್ರಮಾಣವೂ ಸುಮಾರು 50% ಇಳಿಕೆಯಾಗಿದೆ ಎಂದು The Times of India ವರದಿ ಮಾಡಿದೆ.  ಈ ಪ್ರದೇಶವು ಸಾಮಾನ್ಯವಾಗಿ ದೇಶದ ವಿವಿಧ ಭಾಗಗಳು ಮತ್ತು ವಿದೇಶಗಳಿಗೆ ಎಳನೀರು  ರಫ್ತು ಮಾಡುವ ಪ್ರಮುಖ ಕೇಂದ್ರವಾಗಿದ್ದು, ಇತ್ತೀಚಿನ ಉತ್ಪಾದನಾ ಕುಸಿತದಿಂದ ರೈತರು, ವ್ಯಾಪಾರಿಗಳು ಹಾಗೂ ರಫ್ತುದಾರರು ಹಿನ್ನಡೆಯನ್ನು ಅನುಭವಿಸುತ್ತಿದ್ದಾರೆ.

ಸ್ಥಳೀಯ ರೈತರ ಪ್ರಕಾರ, ಕಳೆದ ಬಾರಿ ಸುರಿಸ ಮಳೆ, ಆ ಬಳಿಕದ ಚಳಿ  ಹಾಗೂ ಹವಾಮಾನದಲ್ಲಿ ಉಂಟಾದ ಬದಲಾವಣೆಗಳು ಬೆಳೆ ಚಕ್ರದ ಮೇಲೆ ಪರಿಣಾಮ ಬೀರಿವೆ. ಇದರ ಪರಿಣಾಮವಾಗಿ ತೆಂಗಿನ ಕಾಯಿ ಬೆಳೆಯುವ ಅವಧಿ ಬದಲಾಗಿದೆ.

ಹಿಂದೆ ನವೆಂಬರ್–ಡಿಸೆಂಬರ್ ತಿಂಗಳಲ್ಲಿ ದಿನಕ್ಕೆ ಸುಮಾರು 6 ಲಕ್ಷ ಎಳನೀರು  ಪೂರೈಕೆ ಆಗುತ್ತಿದ್ದರೆ, ಈಗ ಅದು 3 ಲಕ್ಷಕ್ಕೆ ಇಳಿದಿದೆ. ಫೆಬ್ರವರಿ ಅಂತ್ಯ–ಮಾರ್ಚ್ ವೇಳೆಗೆ ಇದು 2 ಲಕ್ಷಕ್ಕೆ ಇಳಿಯುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಉತ್ಪಾದನೆ ಕುಸಿತದಿಂದ ಸ್ಥಳೀಯ ಮಾರುಕಟ್ಟೆಗಳಲ್ಲಿ ಸರಬರಾಜು ಕಡಿಮೆಯಾಗಿದ್ದು,ಹಲವು ಪ್ರದೇಶಗಳಲ್ಲಿ ಎಳನೀರು  ಬೆಲೆ ಏರಿಕೆಯಾಗಿದೆ. ಪ್ರಸ್ತುತ ದೇಶದ ವಿವಿದೆಡೆ ಸರಾಸರಿ ಒಂದು ಎಳನೀರು ಬೆಲೆ ಸುಮಾರು ₹60ಕ್ಕೆ ತಲುಪಿದೆ. ಕಳೆದ ವರ್ಷ ಇದೇ ಸಮಯದಲ್ಲಿ ಇದು ₹45 ಇತ್ತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಪೂರೈಕೆ ಪ್ರಮಾಣ ಕುಸಿತ ಮತ್ತು ಸರಬರಾಜು ಕಡಿಮೆಯ ಹಿನ್ನೆಲೆಯಲ್ಲಿ  ಬೆಲೆಯಲ್ಲಿ ಸಾಧ್ಯತೆ ಇದೆ. ಮುಂದೆ ಬಿಸಲಿನ ಪ್ರಮಾಣವೂ ಹೆಚ್ಚಳವಾಗುವುದರಿಂದ ಎಳನೀರಿಗೆ ಬೇಡಿಕೆ ಹೆಚ್ಚಾಗಲಿದೆ. ಈ ಸಂದರ್ಭ ಪೂರೈಕೆ ವಿಳಂಬವಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.


Tender coconut production in Tamil Nadu’s Pollachi–Anaimalai region has declined by around 40% in the past month, leading to a 50% drop in exports. Unusual weather conditions, including cold temperatures and irregular rainfall, are cited as the main causes. Reduced supply has already increased prices, and further price rise is expected in the coming months.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror