Advertisement
ಪ್ರಮುಖ

ಎಳನೀರು ಸಂಕಷ್ಟ | ಉತ್ಪಾದನೆ ಕುಸಿತದಿಂದ ಸರಬರಾಜಿಗೆ ಹೊಡೆತ..!

Share

ದೇಶದ ಪ್ರಮುಖ ತೆಂಗಿನ ನೀರು ಉತ್ಪಾದನಾ ಪ್ರದೇಶವಾದ “ಭಾರತದ ತೆಂಗಿನ ನಗರಿ” ಎಂದು ಕರೆಯಲ್ಪಡುವ ಪೊಳ್ಳಾಚಿ-ಅಣ್ಣಾಮಲೈ ಭಾಗದಲ್ಲಿ ಕಳೆದ ಕೆಲವು ತಿಂಗಳ ಅವಧಿಯಲ್ಲಿ ಎಳನೀರು  ಉತ್ಪಾದನೆ ಸುಮಾರು 40% ಕುಸಿದಿದೆ. ಇದರ ಪರಿಣಾಮವಾಗಿ ಪೂರೈಕೆ ಪ್ರಮಾಣವೂ ಸುಮಾರು 50% ಇಳಿಕೆಯಾಗಿದೆ ಎಂದು The Times of India ವರದಿ ಮಾಡಿದೆ.  ಈ ಪ್ರದೇಶವು ಸಾಮಾನ್ಯವಾಗಿ ದೇಶದ ವಿವಿಧ ಭಾಗಗಳು ಮತ್ತು ವಿದೇಶಗಳಿಗೆ ಎಳನೀರು  ರಫ್ತು ಮಾಡುವ ಪ್ರಮುಖ ಕೇಂದ್ರವಾಗಿದ್ದು, ಇತ್ತೀಚಿನ ಉತ್ಪಾದನಾ ಕುಸಿತದಿಂದ ರೈತರು, ವ್ಯಾಪಾರಿಗಳು ಹಾಗೂ ರಫ್ತುದಾರರು ಹಿನ್ನಡೆಯನ್ನು ಅನುಭವಿಸುತ್ತಿದ್ದಾರೆ.

ಸ್ಥಳೀಯ ರೈತರ ಪ್ರಕಾರ, ಕಳೆದ ಬಾರಿ ಸುರಿಸ ಮಳೆ, ಆ ಬಳಿಕದ ಚಳಿ  ಹಾಗೂ ಹವಾಮಾನದಲ್ಲಿ ಉಂಟಾದ ಬದಲಾವಣೆಗಳು ಬೆಳೆ ಚಕ್ರದ ಮೇಲೆ ಪರಿಣಾಮ ಬೀರಿವೆ. ಇದರ ಪರಿಣಾಮವಾಗಿ ತೆಂಗಿನ ಕಾಯಿ ಬೆಳೆಯುವ ಅವಧಿ ಬದಲಾಗಿದೆ.

ಹಿಂದೆ ನವೆಂಬರ್–ಡಿಸೆಂಬರ್ ತಿಂಗಳಲ್ಲಿ ದಿನಕ್ಕೆ ಸುಮಾರು 6 ಲಕ್ಷ ಎಳನೀರು  ಪೂರೈಕೆ ಆಗುತ್ತಿದ್ದರೆ, ಈಗ ಅದು 3 ಲಕ್ಷಕ್ಕೆ ಇಳಿದಿದೆ. ಫೆಬ್ರವರಿ ಅಂತ್ಯ–ಮಾರ್ಚ್ ವೇಳೆಗೆ ಇದು 2 ಲಕ್ಷಕ್ಕೆ ಇಳಿಯುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಉತ್ಪಾದನೆ ಕುಸಿತದಿಂದ ಸ್ಥಳೀಯ ಮಾರುಕಟ್ಟೆಗಳಲ್ಲಿ ಸರಬರಾಜು ಕಡಿಮೆಯಾಗಿದ್ದು,ಹಲವು ಪ್ರದೇಶಗಳಲ್ಲಿ ಎಳನೀರು  ಬೆಲೆ ಏರಿಕೆಯಾಗಿದೆ. ಪ್ರಸ್ತುತ ದೇಶದ ವಿವಿದೆಡೆ ಸರಾಸರಿ ಒಂದು ಎಳನೀರು ಬೆಲೆ ಸುಮಾರು ₹60ಕ್ಕೆ ತಲುಪಿದೆ. ಕಳೆದ ವರ್ಷ ಇದೇ ಸಮಯದಲ್ಲಿ ಇದು ₹45 ಇತ್ತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಪೂರೈಕೆ ಪ್ರಮಾಣ ಕುಸಿತ ಮತ್ತು ಸರಬರಾಜು ಕಡಿಮೆಯ ಹಿನ್ನೆಲೆಯಲ್ಲಿ  ಬೆಲೆಯಲ್ಲಿ ಸಾಧ್ಯತೆ ಇದೆ. ಮುಂದೆ ಬಿಸಲಿನ ಪ್ರಮಾಣವೂ ಹೆಚ್ಚಳವಾಗುವುದರಿಂದ ಎಳನೀರಿಗೆ ಬೇಡಿಕೆ ಹೆಚ್ಚಾಗಲಿದೆ. ಈ ಸಂದರ್ಭ ಪೂರೈಕೆ ವಿಳಂಬವಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.


Tender coconut production in Tamil Nadu’s Pollachi–Anaimalai region has declined by around 40% in the past month, leading to a 50% drop in exports. Unusual weather conditions, including cold temperatures and irregular rainfall, are cited as the main causes. Reduced supply has already increased prices, and further price rise is expected in the coming months.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

23 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

1 day ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

1 day ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 day ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

2 days ago