Advertisement
ಪ್ರಮುಖ

ಎಳನೀರು ಸಂಕಷ್ಟ | ಉತ್ಪಾದನೆ ಕುಸಿತದಿಂದ ಸರಬರಾಜಿಗೆ ಹೊಡೆತ..!

Share

ದೇಶದ ಪ್ರಮುಖ ತೆಂಗಿನ ನೀರು ಉತ್ಪಾದನಾ ಪ್ರದೇಶವಾದ “ಭಾರತದ ತೆಂಗಿನ ನಗರಿ” ಎಂದು ಕರೆಯಲ್ಪಡುವ ಪೊಳ್ಳಾಚಿ-ಅಣ್ಣಾಮಲೈ ಭಾಗದಲ್ಲಿ ಕಳೆದ ಕೆಲವು ತಿಂಗಳ ಅವಧಿಯಲ್ಲಿ ಎಳನೀರು  ಉತ್ಪಾದನೆ ಸುಮಾರು 40% ಕುಸಿದಿದೆ. ಇದರ ಪರಿಣಾಮವಾಗಿ ಪೂರೈಕೆ ಪ್ರಮಾಣವೂ ಸುಮಾರು 50% ಇಳಿಕೆಯಾಗಿದೆ ಎಂದು The Times of India ವರದಿ ಮಾಡಿದೆ.  ಈ ಪ್ರದೇಶವು ಸಾಮಾನ್ಯವಾಗಿ ದೇಶದ ವಿವಿಧ ಭಾಗಗಳು ಮತ್ತು ವಿದೇಶಗಳಿಗೆ ಎಳನೀರು  ರಫ್ತು ಮಾಡುವ ಪ್ರಮುಖ ಕೇಂದ್ರವಾಗಿದ್ದು, ಇತ್ತೀಚಿನ ಉತ್ಪಾದನಾ ಕುಸಿತದಿಂದ ರೈತರು, ವ್ಯಾಪಾರಿಗಳು ಹಾಗೂ ರಫ್ತುದಾರರು ಹಿನ್ನಡೆಯನ್ನು ಅನುಭವಿಸುತ್ತಿದ್ದಾರೆ.

ಸ್ಥಳೀಯ ರೈತರ ಪ್ರಕಾರ, ಕಳೆದ ಬಾರಿ ಸುರಿಸ ಮಳೆ, ಆ ಬಳಿಕದ ಚಳಿ  ಹಾಗೂ ಹವಾಮಾನದಲ್ಲಿ ಉಂಟಾದ ಬದಲಾವಣೆಗಳು ಬೆಳೆ ಚಕ್ರದ ಮೇಲೆ ಪರಿಣಾಮ ಬೀರಿವೆ. ಇದರ ಪರಿಣಾಮವಾಗಿ ತೆಂಗಿನ ಕಾಯಿ ಬೆಳೆಯುವ ಅವಧಿ ಬದಲಾಗಿದೆ.

ಹಿಂದೆ ನವೆಂಬರ್–ಡಿಸೆಂಬರ್ ತಿಂಗಳಲ್ಲಿ ದಿನಕ್ಕೆ ಸುಮಾರು 6 ಲಕ್ಷ ಎಳನೀರು  ಪೂರೈಕೆ ಆಗುತ್ತಿದ್ದರೆ, ಈಗ ಅದು 3 ಲಕ್ಷಕ್ಕೆ ಇಳಿದಿದೆ. ಫೆಬ್ರವರಿ ಅಂತ್ಯ–ಮಾರ್ಚ್ ವೇಳೆಗೆ ಇದು 2 ಲಕ್ಷಕ್ಕೆ ಇಳಿಯುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಉತ್ಪಾದನೆ ಕುಸಿತದಿಂದ ಸ್ಥಳೀಯ ಮಾರುಕಟ್ಟೆಗಳಲ್ಲಿ ಸರಬರಾಜು ಕಡಿಮೆಯಾಗಿದ್ದು,ಹಲವು ಪ್ರದೇಶಗಳಲ್ಲಿ ಎಳನೀರು  ಬೆಲೆ ಏರಿಕೆಯಾಗಿದೆ. ಪ್ರಸ್ತುತ ದೇಶದ ವಿವಿದೆಡೆ ಸರಾಸರಿ ಒಂದು ಎಳನೀರು ಬೆಲೆ ಸುಮಾರು ₹60ಕ್ಕೆ ತಲುಪಿದೆ. ಕಳೆದ ವರ್ಷ ಇದೇ ಸಮಯದಲ್ಲಿ ಇದು ₹45 ಇತ್ತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಪೂರೈಕೆ ಪ್ರಮಾಣ ಕುಸಿತ ಮತ್ತು ಸರಬರಾಜು ಕಡಿಮೆಯ ಹಿನ್ನೆಲೆಯಲ್ಲಿ  ಬೆಲೆಯಲ್ಲಿ ಸಾಧ್ಯತೆ ಇದೆ. ಮುಂದೆ ಬಿಸಲಿನ ಪ್ರಮಾಣವೂ ಹೆಚ್ಚಳವಾಗುವುದರಿಂದ ಎಳನೀರಿಗೆ ಬೇಡಿಕೆ ಹೆಚ್ಚಾಗಲಿದೆ. ಈ ಸಂದರ್ಭ ಪೂರೈಕೆ ವಿಳಂಬವಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.


Tender coconut production in Tamil Nadu’s Pollachi–Anaimalai region has declined by around 40% in the past month, leading to a 50% drop in exports. Unusual weather conditions, including cold temperatures and irregular rainfall, are cited as the main causes. Reduced supply has already increased prices, and further price rise is expected in the coming months.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

2 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

7 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

16 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

16 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

17 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

19 hours ago