Advertisement
ಅನುಕ್ರಮ

ಹೊಸರುಚಿ | ಗುಜ್ಜೆ ಶೇಂಗಾ ಮಸಾಲಾ ಪಲ್ಯ

Share

ಗುಜ್ಜೆ ಶೇಂಗಾ ಮಸಾಲಾ ಪಲ್ಯಕ್ಕೆ ಬೇಕಾಗುವ ವಸ್ತುಗಳು ಹಾಗೂ ಮಾಡುವ ವಿಧಾನ : ಶೇಂಗಾ 1/2 ಕಪ್, ಗುಜ್ಜೆ 3/4 ಕಪ್, ಚನ್ನ 6 ಚಮಚ, ಶೇಂಗಾ, ಮತ್ತು ಚನ್ನ 6 ಗಂಟೆ ಕಾಲ ನೆನೆ ಹಾಕಿ. ನಂತರ ತೊಳೆದು ಇಟ್ಟುಕೊಳ್ಳಿ. ಗುಜ್ಜೆ, ಶೇಂಗಾ, ಚನ್ನ ಕುಕ್ಕರ್ ಗೆ ಹಾಕಿ ಇದಕ್ಕೆ ನೀರು, ಉಪ್ಪು ಹಾಕಿ ಬೇಯಿಸಿ.

Advertisement

ಫ್ರೈ ಮಾಡಿ ಕೊಳ್ಳಲು : ಕೊತ್ತಂಬರಿ ಬೀಜ, ಹಿಂಗು, ಕೆಂಪು ಮೆಣಸು, ಹಾಕಿ ಫ್ರೈ ಮಾಡಿ ಕಾಯಿತುರಿ, ಫ್ರೈ ಮಾಡಿದ ಸಾಮಗ್ರಿಗಳನ್ನು ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ. ಬಾಣಲೆಗೆ ಎಣ್ಣೆ, ಸಾಸಿವೆ, ಉದ್ದಿನ, ಬೇಳೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಚಟಪಟಾಯಿಸಿ. ನಂತರ ಬೇಯಿಸಿದ ಸಾಮಗ್ರಿಗಳು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಇದಕ್ಕೆ, ಮೆಣಸಿನ ಪುಡಿ, ಅರಿಸಿನ ಪುಡಿ, ತರಿ ತರಿಯಾಗಿ ಪುಡಿ ಮಾಡಿದ ಸಾಮಗ್ರಿಗಳನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಸ್ಟವ್ ಆಫ್ ಮಾಡಿ. ಬಿಸಿ ಬಿಸಿ ಗುಜ್ಜೆ ಶೇಂಗಾ ಮಸಾಲ ಪಲ್ಯ ರೆಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

51 minutes ago

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

8 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

8 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

24 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

1 day ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

1 day ago