Advertisement
ಸುದ್ದಿಗಳು

ಹೊಸರುಚಿ | ಗುಜ್ಜೆ ಕಟ್ಲೇಟ್

Share

ಗುಜ್ಜೆ ಕಟ್ಲೇಟ್ ಗೆ  ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :………ಮುಂದೆ ಓದಿ……..

ಗುಜ್ಜೆ ಕಟ್ ಮಾಡಿ ಸಿಪ್ಪೆ ತೆಗೆದು ಕಟ್ ಮಾಡಿ ನೀರಿನಲ್ಲಿ ಹಾಕಿ. ನಂತರ ನೀರು ಸೋಸಿಕೊಳ್ಳಿ . ಕುಕ್ಕರ್ ಗೆ ಹಾಕಿ ಇದಕ್ಕೆ ಒಂದು ಆಲೂಗಡ್ಡೆ ಸಿಪ್ಪೆ ತೆಗೆದು ಕಟ್ ಮಾಡಿ ಹಾಕಿ. ಬಟಾಣಿ ಸ್ವಲ್ಪ ಹಾಕಿ ನೀರು ಉಪ್ಪು ರುಚಿಗೆ ತಕ್ಕಷ್ಟು ಸೇರಿಸಿ 3 ಸೀಟಿ ಕೂಗಿಸಿ. ನಂತರ ನೀರು ಸೋಸಿಕೊಳ್ಳಿ. ಇದನ್ನು ಸ್ಮ್ಯಾಶ್ ಮಾಡಿ .

ಮಾಡುವ ವಿಧಾನ : ಬಾಣಲೆಗೆ ಎಣ್ಣೆ,ಸಾಸಿವೆ ಜೀರಿಗೆ, ಹಾಕಿ ಚಟಪಟಾಯಿಸಿ ನಂತರ ಸ್ಮ್ಯಾಶ್ ಮಾಡಿದ ಗುಜ್ಜೆ, ಆಲೂಗೆಡ್ಡೆ ಬಟಾಣಿ ಹಾಕಿ ಮಿಕ್ಸ್ ಮಾಡಿ ಇದಕ್ಕೆ, ಕಿಚನ್ ಕಿಂಗ್ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ನಂತರ ಚಿಕ್ಕ ದಾಗಿ ಕಟ್ ಮಾಡಿದ ಈರುಳ್ಳಿ, ಕೊತ್ತಂಬರಿ ಸೊಪ್ಪು, ಚಿಕ್ಕ ದಾಗಿ ಕಟ್ ಮಾಡಿದ ಹಸಿಮೆಣಸಿನ ಕಾಯಿ , ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಸ್ಟವ್ ಆಫ್ ಮಾಡಿ.

ಒಂದು ಬೌಲ್ ಗೆ 1 ಚಮಚ ಮೈದಾ ಸ್ವಲ್ಪ ನೀರು ಸೇರಿಸಿ ಮಿಕ್ಸ್ ಮಾಡಿ ಇಟ್ಟುಕೊಳ್ಳಿ. ಒಂದು ತಟ್ಟೆಗೆ ಚಿರೋಟಿ ರವೆ ಹಾಕಿ ಇಟ್ಟುಕೊಳ್ಳಿ.  ಮಿಕ್ಸ್ ಮಾಡಿ ಇಟ್ಟ ಸಾಮಗ್ರಿಗಳನ್ನು ಉಂಡೆ ಮಾಡಿ ಕೈಯಲ್ಲಿ ತಟ್ಟಿ ಮೈದಾ ದಲ್ಲಿ ಅದ್ದಿ ಚಿರೋಟಿ ರವೆ ಗೆ ಹಾಕಿ ನಂತರ ತವಾ ಬಿಸಿ ಆದ ನಂತರ ಸ್ವಲ್ಪ ಎಣ್ಣೆ ಹಾಕಿ ಎರಡು ಬದಿ ಫ್ರೈ ಮಾಡಿ ತೆಗೆಯಿರಿ. ಈವಾಗ ಬಿಸಿ ಬಿಸಿಯಾದ ಗುಜ್ಜೆ ಕಟ್ಲೇಟ್ ರೆಡಿ.

ಬರಹ :
ದಿವ್ಯಾ ಮಹೇಶ್
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

9 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

1 day ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

1 day ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

2 days ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

3 days ago