ಸುದ್ದಿಗಳು

ಹೊಸರುಚಿ | ಗುಜ್ಜೆ ಕಟ್ಲೇಟ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುಜ್ಜೆ ಕಟ್ಲೇಟ್ ಗೆ  ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :………ಮುಂದೆ ಓದಿ……..

Advertisement

ಗುಜ್ಜೆ ಕಟ್ ಮಾಡಿ ಸಿಪ್ಪೆ ತೆಗೆದು ಕಟ್ ಮಾಡಿ ನೀರಿನಲ್ಲಿ ಹಾಕಿ. ನಂತರ ನೀರು ಸೋಸಿಕೊಳ್ಳಿ . ಕುಕ್ಕರ್ ಗೆ ಹಾಕಿ ಇದಕ್ಕೆ ಒಂದು ಆಲೂಗಡ್ಡೆ ಸಿಪ್ಪೆ ತೆಗೆದು ಕಟ್ ಮಾಡಿ ಹಾಕಿ. ಬಟಾಣಿ ಸ್ವಲ್ಪ ಹಾಕಿ ನೀರು ಉಪ್ಪು ರುಚಿಗೆ ತಕ್ಕಷ್ಟು ಸೇರಿಸಿ 3 ಸೀಟಿ ಕೂಗಿಸಿ. ನಂತರ ನೀರು ಸೋಸಿಕೊಳ್ಳಿ. ಇದನ್ನು ಸ್ಮ್ಯಾಶ್ ಮಾಡಿ .

ಮಾಡುವ ವಿಧಾನ : ಬಾಣಲೆಗೆ ಎಣ್ಣೆ,ಸಾಸಿವೆ ಜೀರಿಗೆ, ಹಾಕಿ ಚಟಪಟಾಯಿಸಿ ನಂತರ ಸ್ಮ್ಯಾಶ್ ಮಾಡಿದ ಗುಜ್ಜೆ, ಆಲೂಗೆಡ್ಡೆ ಬಟಾಣಿ ಹಾಕಿ ಮಿಕ್ಸ್ ಮಾಡಿ ಇದಕ್ಕೆ, ಕಿಚನ್ ಕಿಂಗ್ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ನಂತರ ಚಿಕ್ಕ ದಾಗಿ ಕಟ್ ಮಾಡಿದ ಈರುಳ್ಳಿ, ಕೊತ್ತಂಬರಿ ಸೊಪ್ಪು, ಚಿಕ್ಕ ದಾಗಿ ಕಟ್ ಮಾಡಿದ ಹಸಿಮೆಣಸಿನ ಕಾಯಿ , ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಸ್ಟವ್ ಆಫ್ ಮಾಡಿ.

ಒಂದು ಬೌಲ್ ಗೆ 1 ಚಮಚ ಮೈದಾ ಸ್ವಲ್ಪ ನೀರು ಸೇರಿಸಿ ಮಿಕ್ಸ್ ಮಾಡಿ ಇಟ್ಟುಕೊಳ್ಳಿ. ಒಂದು ತಟ್ಟೆಗೆ ಚಿರೋಟಿ ರವೆ ಹಾಕಿ ಇಟ್ಟುಕೊಳ್ಳಿ.  ಮಿಕ್ಸ್ ಮಾಡಿ ಇಟ್ಟ ಸಾಮಗ್ರಿಗಳನ್ನು ಉಂಡೆ ಮಾಡಿ ಕೈಯಲ್ಲಿ ತಟ್ಟಿ ಮೈದಾ ದಲ್ಲಿ ಅದ್ದಿ ಚಿರೋಟಿ ರವೆ ಗೆ ಹಾಕಿ ನಂತರ ತವಾ ಬಿಸಿ ಆದ ನಂತರ ಸ್ವಲ್ಪ ಎಣ್ಣೆ ಹಾಕಿ ಎರಡು ಬದಿ ಫ್ರೈ ಮಾಡಿ ತೆಗೆಯಿರಿ. ಈವಾಗ ಬಿಸಿ ಬಿಸಿಯಾದ ಗುಜ್ಜೆ ಕಟ್ಲೇಟ್ ರೆಡಿ.

ಬರಹ :
ದಿವ್ಯಾ ಮಹೇಶ್
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

10 hours ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

10 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

10 hours ago

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…

10 hours ago

ಗದಗ | ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

10 hours ago

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು…

10 hours ago