Advertisement
ಸುದ್ದಿಗಳು

ಹೊಸರುಚಿ | ಗುಜ್ಜೆ ಕಟ್ಲೇಟ್

Share

ಗುಜ್ಜೆ ಕಟ್ಲೇಟ್ ಗೆ  ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :………ಮುಂದೆ ಓದಿ……..

ಗುಜ್ಜೆ ಕಟ್ ಮಾಡಿ ಸಿಪ್ಪೆ ತೆಗೆದು ಕಟ್ ಮಾಡಿ ನೀರಿನಲ್ಲಿ ಹಾಕಿ. ನಂತರ ನೀರು ಸೋಸಿಕೊಳ್ಳಿ . ಕುಕ್ಕರ್ ಗೆ ಹಾಕಿ ಇದಕ್ಕೆ ಒಂದು ಆಲೂಗಡ್ಡೆ ಸಿಪ್ಪೆ ತೆಗೆದು ಕಟ್ ಮಾಡಿ ಹಾಕಿ. ಬಟಾಣಿ ಸ್ವಲ್ಪ ಹಾಕಿ ನೀರು ಉಪ್ಪು ರುಚಿಗೆ ತಕ್ಕಷ್ಟು ಸೇರಿಸಿ 3 ಸೀಟಿ ಕೂಗಿಸಿ. ನಂತರ ನೀರು ಸೋಸಿಕೊಳ್ಳಿ. ಇದನ್ನು ಸ್ಮ್ಯಾಶ್ ಮಾಡಿ .

Advertisement

ಮಾಡುವ ವಿಧಾನ : ಬಾಣಲೆಗೆ ಎಣ್ಣೆ,ಸಾಸಿವೆ ಜೀರಿಗೆ, ಹಾಕಿ ಚಟಪಟಾಯಿಸಿ ನಂತರ ಸ್ಮ್ಯಾಶ್ ಮಾಡಿದ ಗುಜ್ಜೆ, ಆಲೂಗೆಡ್ಡೆ ಬಟಾಣಿ ಹಾಕಿ ಮಿಕ್ಸ್ ಮಾಡಿ ಇದಕ್ಕೆ, ಕಿಚನ್ ಕಿಂಗ್ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ನಂತರ ಚಿಕ್ಕ ದಾಗಿ ಕಟ್ ಮಾಡಿದ ಈರುಳ್ಳಿ, ಕೊತ್ತಂಬರಿ ಸೊಪ್ಪು, ಚಿಕ್ಕ ದಾಗಿ ಕಟ್ ಮಾಡಿದ ಹಸಿಮೆಣಸಿನ ಕಾಯಿ , ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಸ್ಟವ್ ಆಫ್ ಮಾಡಿ.

ಒಂದು ಬೌಲ್ ಗೆ 1 ಚಮಚ ಮೈದಾ ಸ್ವಲ್ಪ ನೀರು ಸೇರಿಸಿ ಮಿಕ್ಸ್ ಮಾಡಿ ಇಟ್ಟುಕೊಳ್ಳಿ. ಒಂದು ತಟ್ಟೆಗೆ ಚಿರೋಟಿ ರವೆ ಹಾಕಿ ಇಟ್ಟುಕೊಳ್ಳಿ.  ಮಿಕ್ಸ್ ಮಾಡಿ ಇಟ್ಟ ಸಾಮಗ್ರಿಗಳನ್ನು ಉಂಡೆ ಮಾಡಿ ಕೈಯಲ್ಲಿ ತಟ್ಟಿ ಮೈದಾ ದಲ್ಲಿ ಅದ್ದಿ ಚಿರೋಟಿ ರವೆ ಗೆ ಹಾಕಿ ನಂತರ ತವಾ ಬಿಸಿ ಆದ ನಂತರ ಸ್ವಲ್ಪ ಎಣ್ಣೆ ಹಾಕಿ ಎರಡು ಬದಿ ಫ್ರೈ ಮಾಡಿ ತೆಗೆಯಿರಿ. ಈವಾಗ ಬಿಸಿ ಬಿಸಿಯಾದ ಗುಜ್ಜೆ ಕಟ್ಲೇಟ್ ರೆಡಿ.

ಬರಹ :
ದಿವ್ಯಾ ಮಹೇಶ್
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

3 days ago