Advertisement
ಸುದ್ದಿಗಳು

ಹೊಸರುಚಿ | ಗುಜ್ಜೆ ಕಟ್ಲೇಟ್

Share

ಗುಜ್ಜೆ ಕಟ್ಲೇಟ್ ಗೆ  ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :………ಮುಂದೆ ಓದಿ……..

ಗುಜ್ಜೆ ಕಟ್ ಮಾಡಿ ಸಿಪ್ಪೆ ತೆಗೆದು ಕಟ್ ಮಾಡಿ ನೀರಿನಲ್ಲಿ ಹಾಕಿ. ನಂತರ ನೀರು ಸೋಸಿಕೊಳ್ಳಿ . ಕುಕ್ಕರ್ ಗೆ ಹಾಕಿ ಇದಕ್ಕೆ ಒಂದು ಆಲೂಗಡ್ಡೆ ಸಿಪ್ಪೆ ತೆಗೆದು ಕಟ್ ಮಾಡಿ ಹಾಕಿ. ಬಟಾಣಿ ಸ್ವಲ್ಪ ಹಾಕಿ ನೀರು ಉಪ್ಪು ರುಚಿಗೆ ತಕ್ಕಷ್ಟು ಸೇರಿಸಿ 3 ಸೀಟಿ ಕೂಗಿಸಿ. ನಂತರ ನೀರು ಸೋಸಿಕೊಳ್ಳಿ. ಇದನ್ನು ಸ್ಮ್ಯಾಶ್ ಮಾಡಿ .

ಮಾಡುವ ವಿಧಾನ : ಬಾಣಲೆಗೆ ಎಣ್ಣೆ,ಸಾಸಿವೆ ಜೀರಿಗೆ, ಹಾಕಿ ಚಟಪಟಾಯಿಸಿ ನಂತರ ಸ್ಮ್ಯಾಶ್ ಮಾಡಿದ ಗುಜ್ಜೆ, ಆಲೂಗೆಡ್ಡೆ ಬಟಾಣಿ ಹಾಕಿ ಮಿಕ್ಸ್ ಮಾಡಿ ಇದಕ್ಕೆ, ಕಿಚನ್ ಕಿಂಗ್ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ನಂತರ ಚಿಕ್ಕ ದಾಗಿ ಕಟ್ ಮಾಡಿದ ಈರುಳ್ಳಿ, ಕೊತ್ತಂಬರಿ ಸೊಪ್ಪು, ಚಿಕ್ಕ ದಾಗಿ ಕಟ್ ಮಾಡಿದ ಹಸಿಮೆಣಸಿನ ಕಾಯಿ , ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಸ್ಟವ್ ಆಫ್ ಮಾಡಿ.

ಒಂದು ಬೌಲ್ ಗೆ 1 ಚಮಚ ಮೈದಾ ಸ್ವಲ್ಪ ನೀರು ಸೇರಿಸಿ ಮಿಕ್ಸ್ ಮಾಡಿ ಇಟ್ಟುಕೊಳ್ಳಿ. ಒಂದು ತಟ್ಟೆಗೆ ಚಿರೋಟಿ ರವೆ ಹಾಕಿ ಇಟ್ಟುಕೊಳ್ಳಿ.  ಮಿಕ್ಸ್ ಮಾಡಿ ಇಟ್ಟ ಸಾಮಗ್ರಿಗಳನ್ನು ಉಂಡೆ ಮಾಡಿ ಕೈಯಲ್ಲಿ ತಟ್ಟಿ ಮೈದಾ ದಲ್ಲಿ ಅದ್ದಿ ಚಿರೋಟಿ ರವೆ ಗೆ ಹಾಕಿ ನಂತರ ತವಾ ಬಿಸಿ ಆದ ನಂತರ ಸ್ವಲ್ಪ ಎಣ್ಣೆ ಹಾಕಿ ಎರಡು ಬದಿ ಫ್ರೈ ಮಾಡಿ ತೆಗೆಯಿರಿ. ಈವಾಗ ಬಿಸಿ ಬಿಸಿಯಾದ ಗುಜ್ಜೆ ಕಟ್ಲೇಟ್ ರೆಡಿ.

ಬರಹ :
ದಿವ್ಯಾ ಮಹೇಶ್
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

3 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

5 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

10 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

1 day ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

1 day ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago