Advertisement
ಅನುಕ್ರಮ

ಹೊಸರುಚಿ | ಗುಜ್ಜೆ ಸಮೋಸ

Share

ಗುಜ್ಜೆ ಸಮೋಸಕ್ಕೆ ಬೇಕಾಗುವ ಸಾಮಗ್ರಿಗಳು  ಹಾಗೂ ಮಾಡುವ ವಿಧಾನ : ಗೋಧಿ ಹುಡಿ 3 ಲೋಟ, ಮೈದಾ 1/4 ಕಪ್, ಕಪ್ಪು ಎಳ್ಳು 1/2 ಚಮಚ, ಉಪ್ಪು ರುಚಿಗೆ ತಕ್ಕಷ್ಟು ನೀರು ಸೇರಿಸಿ ಹಿಟ್ಟನ್ನು  ಮೃದುವಾಗಿ ಕಲೆಸಿ. ಮಸಾಲೆ ಮಾಡಲು : ಬಟಾಣಿ ನೆನೆ ಹಾಕಿ,ಎಳೆಯ ಹಲಸಿನ ಕಾಯಿ ಕಟ್ ಮಾಡಿ ಕ್ಲೀನ್ ಮಾಡಿ ಇಟ್ಟು ಕೊಳ್ಳಿ , ನಂತರ ಕುಕ್ಕರ್ ಗೆ ಹಾಕಿ ಇದಕ್ಕೆ ನೆನೆ ಹಾಕಿದ ಬಟಾಣಿ, ಉಪ್ಪು ರುಚಿಗೆ ತಕ್ಕಷ್ಟು, ನೀರು ಸೇರಿಸಿ ಬೇಯಿಸಿ. ನಂತರ ಬಿಸಿ ಸ್ವಲ್ಪ ಆರಿದ ನಂತರ ಜಾರ್ ಗೆ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ.

ಬಾಣಲೆಗೆ ಎಣ್ಣೆ, ಸಾಸಿವೆ, ಉದ್ದಿನ, ಬೇಳೆ ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಚಟಪಟಾಯಿಸಿ ನಂತರ ಚಿಕ್ಕ ದಾಗಿ ಕಟ್ ಮಾಡಿದ ಈರುಳ್ಳಿ, ಶುಂಠಿ ಬೆಳ್ಳುಳ್ಳಿ ಪೇಸ್ಟ್ 1/4 ಚಮಚ, ಗರಂ ಮಸಾಲ 1/2 ಚಮಚ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ 1/4 ಚಮಚ, ಸಮೋಸಾ ಮಸಾಲೆ 1 ಚಮಚ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಸ್ಟವ್ ಆಫ್ ಮಾಡಿ.

ನಂತರ ಹಿಟ್ಟನ್ನು ನಾದಿ ಉಂಡೆಗಳನ್ನು ಮಾಡಿ, ಚಪಾತಿಯಂತೆ ಲಟ್ಟಿಸಿ ಕಟ್ ಮಾಡಿ ನಂತರ ಮಿಕ್ಸ್ ಮಾಡಿ ಇಟ್ಟ ಮಸಾಲೆ ಯನ್ನು ಹಾಕಿ ಸಮೋಸಾ ಆಕಾರದಲ್ಲಿ ಮಾಡಿ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಈವಾಗ ಬಿಸಿ ಬಿಸಿಯಾದ ಗುಜ್ಜೆ ಸಮೋಸಾ ರೆಡಿ …

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

17 hours ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

17 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago