Advertisement
ಅನುಕ್ರಮ

ಹೊಸರುಚಿ | ಗುಜ್ಜೆ ಸಮೋಸ

Share

ಗುಜ್ಜೆ ಸಮೋಸಕ್ಕೆ ಬೇಕಾಗುವ ಸಾಮಗ್ರಿಗಳು  ಹಾಗೂ ಮಾಡುವ ವಿಧಾನ : ಗೋಧಿ ಹುಡಿ 3 ಲೋಟ, ಮೈದಾ 1/4 ಕಪ್, ಕಪ್ಪು ಎಳ್ಳು 1/2 ಚಮಚ, ಉಪ್ಪು ರುಚಿಗೆ ತಕ್ಕಷ್ಟು ನೀರು ಸೇರಿಸಿ ಹಿಟ್ಟನ್ನು  ಮೃದುವಾಗಿ ಕಲೆಸಿ. ಮಸಾಲೆ ಮಾಡಲು : ಬಟಾಣಿ ನೆನೆ ಹಾಕಿ,ಎಳೆಯ ಹಲಸಿನ ಕಾಯಿ ಕಟ್ ಮಾಡಿ ಕ್ಲೀನ್ ಮಾಡಿ ಇಟ್ಟು ಕೊಳ್ಳಿ , ನಂತರ ಕುಕ್ಕರ್ ಗೆ ಹಾಕಿ ಇದಕ್ಕೆ ನೆನೆ ಹಾಕಿದ ಬಟಾಣಿ, ಉಪ್ಪು ರುಚಿಗೆ ತಕ್ಕಷ್ಟು, ನೀರು ಸೇರಿಸಿ ಬೇಯಿಸಿ. ನಂತರ ಬಿಸಿ ಸ್ವಲ್ಪ ಆರಿದ ನಂತರ ಜಾರ್ ಗೆ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ.

ಬಾಣಲೆಗೆ ಎಣ್ಣೆ, ಸಾಸಿವೆ, ಉದ್ದಿನ, ಬೇಳೆ ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಚಟಪಟಾಯಿಸಿ ನಂತರ ಚಿಕ್ಕ ದಾಗಿ ಕಟ್ ಮಾಡಿದ ಈರುಳ್ಳಿ, ಶುಂಠಿ ಬೆಳ್ಳುಳ್ಳಿ ಪೇಸ್ಟ್ 1/4 ಚಮಚ, ಗರಂ ಮಸಾಲ 1/2 ಚಮಚ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ 1/4 ಚಮಚ, ಸಮೋಸಾ ಮಸಾಲೆ 1 ಚಮಚ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಸ್ಟವ್ ಆಫ್ ಮಾಡಿ.

ನಂತರ ಹಿಟ್ಟನ್ನು ನಾದಿ ಉಂಡೆಗಳನ್ನು ಮಾಡಿ, ಚಪಾತಿಯಂತೆ ಲಟ್ಟಿಸಿ ಕಟ್ ಮಾಡಿ ನಂತರ ಮಿಕ್ಸ್ ಮಾಡಿ ಇಟ್ಟ ಮಸಾಲೆ ಯನ್ನು ಹಾಕಿ ಸಮೋಸಾ ಆಕಾರದಲ್ಲಿ ಮಾಡಿ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಈವಾಗ ಬಿಸಿ ಬಿಸಿಯಾದ ಗುಜ್ಜೆ ಸಮೋಸಾ ರೆಡಿ …

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

14 minutes ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

8 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

15 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

23 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

24 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

1 day ago